Friday, March 20, 2026
Friday, March 20, 2026

Sri Ramakrishna Vidyaniketan ಈಜು ಸೇರಿದಂತೆ ಇತರ ಕ್ರೀಡೆಗಳು ಮಕ್ಕಳಲ್ಲಿ ಮಾನಸಿಕ ಪ್ರೌಢತೆ ಬೆಳೆಸುತ್ತವೆ- ಮಂಜುನಾಥ್

Date:

Sri Ramakrishna Vidyaniketan ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶ್ರೀ ರಾಮಕೃಷ್ಣ ವಿದ್ಯಾನಿಕೇತನ, ಗೋಪಾಳ ಇದರ ಸಂಯುಕ್ತಾಶ್ರಯದಲ್ಲಿ ಇಂದು ಆರಂಭಗೊಂಡ 2025 – 26ರ ಸಾಲಿನ 14 ರಿಂದ 17 ವಯೋಮಿತಿಯ ಬಾಲಕ, ಬಾಲಕಿಯರ ಈಜು ಕ್ರೀಡಾಕೂಟವನ್ನು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಅವರು ಉದ್ಘಾಟಿಸಿದರು.
ಅವರು ಮಾತನಾಡುತ್ತಾ ಪ್ರತಿ ಮಗುವಿನ ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸು ಬೆಳೆಯಲು ಕ್ರೀಡೆ ಸಹಕಾರಿ ಈಜು ಸೇರಿದಂತೆ ಇತರ ಕ್ರೀಡೆಗಳು ಹಾಗೂ ವ್ಯಾಯಾಮ ಮಕ್ಕಳಲ್ಲಿ ಮಾನಸಿಕ ಪ್ರೌಢತೆಯನ್ನು ಬೆಳೆಸುತ್ತದೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್, ಗಿಡ ಮತ್ತು ಯುವಜನ ಸಬಲೀಕರಣ ಇಲಾಖೆಯ ಉಪನಿಷಕ ರೇಖ್ಯಾನಾಯ್ಕ್ ಅವರು ಉಪಸ್ಥಿತರಿದ್ದರು.
Sri Ramakrishna Vidyaniketan ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನದ ಅಧ್ಯಕ್ಷ ಡಾ. ಡಿ. ಆರ್. ನಾಗೇಶ್ ವಹಿಸಿದ್ದು, ಕಾರ್ಯದರ್ಶಿ ಶೋಭಾ ವೆಂಕಟರಮಣ, ಟಿ.ಪಿ. ಚಂದ್ರಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಕುಮಾರಿ ಕವನ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ತೀರ್ಥೇಶ್ ಸ್ವಾಗತಿಸಿದರು. ಹಿರಿಯ ಶಿಕ್ಷಕ ಟಿ.ವಿ. ಗಜೇಂದ್ರನಾಥ್ ವಂದಿಸಿದರು.
ಗೋಪಾಳದ ರಾಮಕೃಷ್ಣ ವಿದ್ಯಾ ನಿಕೇತನದ ಪಕ್ಕದಲ್ಲಿರುವ ಕ್ರೀಡಾ ಸಂಕೀರ್ಣದ ಈಜು ಕೊಳದಲ್ಲಿ ಈ ಸ್ಪರ್ಧೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...