Monday, February 2, 2026
Monday, February 2, 2026

Innerwheel Club Organization ಇನ್ನರ್ ವೀಲ್ ಸಂಸ್ಥೆಯು ಆರ್ಥಿಕ ಸಂಕಷ್ಟದಲ್ಲಿರುವ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಿದೆ- ಅನ್ನಪೂರ್ಣ ರಂಗರಾಜನ್

Date:

Innerwheel Club Organization ಇನ್ನರ್‌ವ್ಹೀಲ್ ಕ್ಲಬ್ ಸಂಸ್ಥೆಯು ವಿಶ್ವಾದ್ಯಂತ ಸೇವಾಕಾರ್ಯಗಳನ್ನು ನಡೆಸುತ್ತಿದೆ ಎಂದು ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಅಧ್ಯಕ್ಷೆ ಅನ್ನಪೂರ್ಣ ರಂಗರಾಜನ್ ಹೇಳಿದರು.

ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ವತಿಯಿಂದ ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಮಗುವಿನ ವಿದ್ಯಾಭ್ಯಾಸಕ್ಕಾಗಿ ಹತ್ತು ಸಾವಿರ ರೂ. ದೇಣಿಗೆ ನೀಡಿ ಮಾತನಾಡಿ, ಇನ್ನರ್‌ವ್ಹೀಲ್ ಸಂಸ್ಥೆಯು ಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ನೆರವು ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿ ಇರುವ ಮಕ್ಕಳಿಗೆ ಹಣಕಾಸಿನ ನೆರವು ಒದಗಿಸುತ್ತಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಕಾರ್ಯದರ್ಶಿ ಸುಮಾ ಸತೀಶ್ ಮಾತನಾಡಿ, ನಮ್ಮ ಕ್ಲಬ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಜತೆಯಲ್ಲಿ ಆರೋಗ್ಯ ಜಾಗೃತಿ, ರಸ್ತೆ ಸುರಕ್ಷತೆ ಅರಿವು ಸೇರಿದಂತೆ ವೈವಿಧ್ಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇನ್ನಷ್ಟು ಸೇವಾ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

Innerwheel Club Organization ಇದೇ ಸಂದರ್ಭದಲ್ಲಿ ಇಬ್ಬರು ಹಿರಿಯ ಶಾಲಾ ಶಿಕ್ಷಕರಾದ ರಾಘವೇಂದ್ರ ಪಾಟೀಲ್ ಮತ್ತು ಟಿ.ಜಯರಾಂ ಬೋವಿ ಅವರನ್ನು ಗೌರವಿಸಲಾಯಿತು. ಶೋಭಾ ರಾಣಿ, ಸುಮಾ ಹರಿಪ್ರಸಾದ್, ಉಮಾ ಅಮರ್, ಮೇಘ ಜೋಷಿ, ಆಶಾ ನಂದಿಶ್, ಪ್ರಿಯಾ ಮತ್ತು ಶಾಲೆಯ ಮುಖ್ಯಸ್ಥರಾದ ರಾಘವೇಂದ್ರ ಪಾಟೀಲ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...