Friday, March 20, 2026
Friday, March 20, 2026

Shivamogga Municipal Corporation ಜಿಲ್ಲೆಯ ಜನತೆಯ ಸಡಗರದ ದಸರಾ ಉತ್ಸವಕ್ಕೆ ಎಲ್ಲರೂ ಆಗಮಿಸಿ,ಪಾಲ್ಗೊಳ್ಳಿ- ಎಸ್.ಎನ್.ಚನ್ನಬಸಪ್ಪ

Date:

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 02ರವರೆಗೆ ಅದ್ದೂರಿಯಾಗಿ ನಡೆಯಲಿರುವ ನಮ್ಮೂರ ನಾಡಹಬ್ಬ ”ಶಿವಮೊಗ್ಗ ದಸರಾ – 2025”ಕ್ಕೆ ಸಂಬಂಧಿಸಿದಂತೆ ಇಂದು ಮಹಾನಗರ ಪಾಲಿಕೆಯಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು.

ಈ ಬಾರಿ ಒಟ್ಟು 11 ದಿನಗಳ ಕಾಲ ನಡೆಯಲಿರುವ ಈ ದಸರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂಶಗಳನ್ನು ಒಳಗೊಂಡ ಹಬ್ಬವಾಗಿದ್ದು, ನಾಗರೀಕರ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾನಗರ ಪಾಲಿಕೆಯು ಉತ್ಸವದ ಯಶಸ್ಸಿಗಾಗಿ ಅಗತ್ಯ ಕ್ರಮಗಳನ್ನೂ ಕೈಗೆತ್ತಿಕೊಂಡಿದೆ.

ವಿಶೇಷತೆಗಳು:

  • ಸೆಪ್ಟೆಂಬರ್ 22, 2025: ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಯ ಮೂಲಕ ದಸರಾ ಮಹೋತ್ಸವಕ್ಕೆ ವೈಭವಯುತವಾಗಿ ಚಾಲನೆ ನೀಡಲಾಗುವುದು.
  • ⁠ಈ ವರ್ಷದ ಶಿವಮೊಗ್ಗ ದಸರಾ ಕಾರ್ಯಕ್ರಮಗಳಿಗೆ ಪ್ರಸಿದ್ಧ ಚಲನಚಿತ್ರ ನಟ-ನಟಿಯರು ಹಾಗೂ ಧಾರ್ಮಿಕ,ಸಾಮಾಜಿಕ,ರಾಜಕೀಯ ಮತ್ತು ವಿವಿಧಕ್ಷೇತ್ರಗಳಲ್ಲಿನ ಸಾಧಕರು ಹಾಗೂ ಗಣ್ಯರು ಭಾಗವಹಿಸುವರು.
  • ಪ್ರತಿದಿನ ನಗರದ ವಿವಿಧ ವೇದಿಕೆಗಳಲ್ಲಿ ನಗರ, ಜಿಲ್ಲೆಯ ಹಾಗೂ ರಾಜ್ಯದ ಖ್ಯಾತ ಕಲಾವಿದರಿಂದ ಕಲೆ,ಸಾಹಿತ್ಯ,ಸಂಗೀತ, ನೃತ್ಯ, ನಾಟಕ ಮತ್ತು ಜನಪದ ಕಲೆಗಳ ಮನಮೋಹಕ ಪ್ರದರ್ಶನ.
  • ಅಕ್ಟೋಬರ್ 2, 2025: ಬೆಳ್ಳಿ ಮಂಟಪದಲ್ಲಿ “ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿಯ ವಿಗ್ರಹದ ಅಂಬಾರಿ ಮೆರವಣಿಗೆಯೊಂದಿಗೆ” ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನೆರವೇರಲಿದೆ.

Shivamogga Municipal Corporation ಈ ಬಾರಿಯ “ಶಿವಮೊಗ್ಗ ದಸರಾ-2025” ರಲ್ಲಿ 15 ವಿವಿಧ ರೀತಿಯ ದಸರಾಗಳನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ! •ಕಲಾ ದಸರಾ •ಚಲನಚಿತ್ರ ದಸರಾ
•ಪರಿಸರ ದಸರಾ •ಜ್ಞಾನ ದಸರಾ •ಪೌರಕಾರ್ಮಿಕರ ದಸರಾ •ಪತ್ರಿಕಾ ದಸರಾ •ಮಹಿಳಾ ದಸರಾ •ಆಹಾರ ದಸರಾ •ರೈತ ದಸರಾ •ಮಕ್ಕಳ ದಸರಾ •ಗಮಕ ದಸರಾ •ರಂಗ ದಸರಾ •ಯೋಗ ದಸರಾ •ಯುವ ದಸರಾ •ಸಾಂಸ್ಕೃತಿಕ ದಸರಾ, ಹೀಗೆ ವಿಜೃಂಭಣೆಯಾಗಿ ನಗರದ ವಿವಿಧ ಭಾಗಗಳಲ್ಲಿ ದಸರಾ ಕಾರ್ಯಕ್ರಮಗಳನ್ನು ನಡೆಸಲುದ್ದೇಶಿಸಿದ್ದು, ಇದು ಕೇವಲ ನಗರದ ನಾಗರೀಕರಿಗೆ ಮಾತ್ರವಲ್ಲದೆ, ಸಂಪೂರ್ಣ ಜಿಲ್ಲೆಯ ಜನತೆಗೆ ಸಡಗರದ ಸಂಭ್ರಮವನ್ನು ನೀಡುವಂತಹ ನಾಡಹಬ್ಬವಾಗಲಿದೆ. ಎಲ್ಲರೂ ಆಗಮಿಸಿ ಹಬ್ಬದ ಸಡಗರದಲ್ಲಿ ಪಾಲ್ಗೊಳ್ಳಬೇಕೆಂದು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...