Monday, February 2, 2026
Monday, February 2, 2026

Sahyadri Science College ಸಹ್ಯಾದ್ರಿ ಕಾಲೇಜಿನ ಎನ್.ಸಿ.ಸಿ‌.ವಿಭಾಗದಿಂದ ಸ್ವಚ್ಛತಾ ಚಟುವಟಿಕೆ

Date:

Sahyadri Science College ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಎನ್.ಸಿ.ಸಿ ವಿಭಾಗದಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಆಚರಿಸಲಾಯಿತು.

ಡಿಜೆಬಿ ಆವರಣ ಮತ್ತು ಎಂ ಆರ್ ಎಸ್ ಸರ್ಕಲ್ ನಲ್ಲಿ ಎನ್ ಸಿ ಸಿ ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಮಾಡಿದರು. ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ ಪರಿಸರ ಸ್ವಚ್ಛತೆಯ ಪ್ರಾಮುಖ್ಯತೆ, ಪ್ಲಾಸ್ಟಿಕ್ ನಿಂದ ಪರಿಸರದಲ್ಲಿ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ವಾಗಿದ್ದರೂ ಇನ್ನೂ ಉತ್ಪತ್ತಿ ನಿಂತಿಲ್ಲ ,ಪ್ಲಾಸ್ಟಿಕ್ ಉತ್ಪಾದನಾ ಘಟಕಗಳನ್ನು ನಿಲ್ಲಿಸುವ ತನಕ ಈ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳು ಹೆಚ್ಚುತ್ತಲೇ ಇರುತ್ತವೆ. ಸರ್ಕಾರ ಕೂಡಲೇ ಗಮನಹರಿಸಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪಾದನಾ ಘಟಕಗಳನ್ನು ನಿಲ್ಲಿಸಿದಲ್ಲಿ ಪರಿಸರದಲ್ಲಿ ಜೀವ ಜಂತುಗಳು ಉಳಿಯುವುವು ಎಂದು ತಿಳಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿದ್ದರು.

Sahyadri Science College ಅಧಿಕಾರಿಗಳಾದ ಲೆಫ್ಟಿನೆಂಟ್ ವಿದ್ಯಾಶಂಕರ್, ಹವಾಲ್ದಾರ್ ಬಾನೆಶ್, ಉಸ್ತುವಾರಿ ಪ್ರಾಂಶುಪಾಲರಾದ ಡಾ. ರಮೇಶ್ ಬಾಬು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...