Monday, February 2, 2026
Monday, February 2, 2026

Klive Special Article ನವರಾತ್ರಿ ಎಂಟನೇ ದಿನ, ದೇವಿಯ ಮಹಾಗೌರಿ ರೂಪದ ಆರಾಧನೆ, ” ಮಹಾಗೌರಿ ಶುಭಂ ದದ್ಯಾತ್”

Date:

ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ

ನವರಾತ್ರಿ(ಎಂಟನೆಯದಿನ)


Klive Special Article ಶ್ರೀಮಹಾಗೌರಿ ಮಾತೆಯ ಆರಾಧನೆಯ ದಿನ

“ಶ್ವೇತೆ ವೃಷೇ ಸಮಾರೂಢಾ ಶ್ವೇತಾಂಬರಧರಾ ಶುಚಿಃ/
ಮಹಾಗೌರೀ ಶುಭಂ ದದ್ಯಾತ್ ಮಹಾದೇವ
ಪ್ರಮೋದದಾ//


ಇಂದು ನವರಾತ್ರಿಯ ಎಂಟನೆಯ ದಿವಸ.
ಇಂದು ದೇವಿಯ ಎಂಟನೆಯ ರೂಪವಾದ ಮಹಾ
ಗೌರಿಯ ಆರಾಧನೆಯ ದಿನ.
ಸರ್ವ ಸನ್ಮಂಗಳ ಕಾರಿಣಿಯಾದ ದೇವಿಯ ರೂಪ
ಮಹಾಗೌರಿಯ ಅವತಾರ ರೂಪ.
ಶ್ವೇತ ವರ್ಣದಿಂದ ಕಂಗೊಳಿಸುವ ಮಾತೆಯ ದೇಹವೆಲ್ಲಾ ಪ್ರಭೆಯಿಂದ ಹೊಳೆಯುವುದು. ನಂದಿ ವಾಹನ ರೂಢಳಾದ ದೇವಿಯು ಶಾಂತಿ ಮತ್ತು ಸಂತೋಷದ ಪ್ರತೀಕ.
ನಾಲ್ಕು ಭುಜಗಳನ್ನು ಹೊಂದಿರುವ ಮಾತೆ,ಅಭಯ ಹಸ್ತದಿಂದ ಭಕ್ತರನ್ನು ಹರಸುತ್ತಿದ್ದಾಳೆ.ಒಂದು ಕೈಯಲ್ಲಿ
ದುಷ್ಟಶಕ್ತಿಗಳನ್ನು ನಿಗ್ರಹಿಸಲು ತ್ರಿಶೂಲವನ್ನು ಹಿಡಿದಿರು
ತ್ತಾಳೆ.ಪಾರ್ವತೀ ದೇವಿಯು ಮನುಷ್ಯರ ಅವತಾರ ಎತ್ತಿ ಭೂಮಿಯಲ್ಲಿ ಜನಿಸಿದಳು. ಶಿವನನ್ನು ಪಡೆಯುವುದು ಅವಳ ಗುರಿಯಾಗಿರುತ್ತದೆ. ನಾರದ ಮಹರ್ಷಿಗಳ ಸಲಹೆಯಂತೆ ಶಿವನನ್ನು ಒಲಿಸಿಕೊಳ್ಳಲು ತಪಸ್ಸನ್ನು ಮಾಡುವರು. ಸುದೀರ್ಘ
ತಪಸ್ಸನ್ನು ಮಾಡುತ್ತಾ ನೀರು ಆಹಾರವನ್ನೂ ತ್ಯಜಿಸುತ್ತಾಳೆ.
ಬಿಸಿಲಿನಿಂದ ಆಗಿ ಆಕೆಯ ದೇಹವು ಸಂಪೂರ್ಣವಾಗಿ ಕಪ್ಪಾಗುವುದು ಮತ್ತು ದೀರ್ಘಕಾಲ ತಪಸ್ಸನ್ನು ಮಾಡುತ್ತಾ ಕುಳಿತ ಕಾರಣ ಆಕೆಯ ಮುಂಬೈಗೆ ಧೂಳು ಮೆತ್ತಿಕೊಳ್ಳುತ್ತದೆ.
Klive Special Article ಇವಳ ತಪಸ್ಸಿಗೆ ಸಂತುಷ್ಟನಾದ ಶಿವನು ಪಾರ್ವತಿಯ ಮೈಮೇಲಿನ ಕಪ್ಪುಬಣ್ಣ ಮತ್ತು ಇಷ್ಟು ದಿನಗಳ ಕಷ್ಟಗಳ ಪರಿಹಾರಕ್ಕಾಗಿ ಗಂಗಾಜಲವನ್ನು ಮೈಮೇಲೆ ಹರಿಸಿದ್ದರಿಂದ ಮೈಯೆಲ್ಲಾ ಕಾಂತಿಯಿಂದ ಹೊಳೆಯತೊಡಗಿತು.
ಆಕೆಯು ಮಹಾಗೌರಿಯಾಗಿ ಹೊಸ ಜನ್ಮ ಎತ್ತಿದಳು.ಶಿವನು ಆಕೆಯ ಭಕ್ತಿಗೆ ಮೆಚ್ಚಿ ಅವಳ ಇಷ್ಟದ ಪ್ರಕಾರ ಆಕೆಯನ್ನು ವರಿಸಿದ.
ಭಕ್ತರಿಗೆ ಶಾಂತಿ ಮತ್ತು ಸಂತೋಷವನ್ನು ಕೊಟ್ಟು ಅನುಗ್ರಹಿಸುವ ಮಹಾಗೌರಿಮಾತೆಗೆ ಭಕ್ತಿಯ ನಮನಗಳನ್ನು ಅರ್ಪಿಸಿ ತಾಯಿಯ ಅನುಗ್ರಹಕ್ಕೆ ಪಾತ್ರರಾಗೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...