Sunday, August 23, 2026
Sunday, August 23, 2026

CM Siddharamaiah ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾಸಂತ, ಗಾಂಧೀಜಿ- ಸಿದ್ಧರಾಮಯ್ಯ

Date:

CM Siddharamaiah ಶಸ್ತ್ರವಿಲ್ಲದೆ ಯುದ್ಧ ಗೆಲ್ಲಲು ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದ ಮಹಾತ್ಮ ಗಾಂಧಿ, ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಗಾಂಧಿ ಜಯಂತಿ ಸಂದೇಶದಲ್ಲಿ ತಿಳಿಸಿದ್ದಾರೆ.

ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾನ್ ಸಂತ, ಧರ್ಮದ ಹಾದಿಯಲ್ಲಿ ನಡೆಸಿದ ದಾರ್ಶನಿಕ.
ಜಗದ ಕಷ್ಟಗಳಿಗೆಲ್ಲ ಮರುಗುತ್ತಿದ್ದ ಬಾಪುವಿನ ಹೃದಯದೊಳಗೆ ಅದೆಷ್ಟು ಕರುಣೆ, ಪ್ರೀತಿ ತುಂಬಿತ್ತೆಂದು ಊಹಿಸುವುದು ಅಸಾಧ್ಯ.

ಸತ್ಯ, ಶಾಂತಿ, ಸಹನೆ, ಸರ್ವಧರ್ಮ ಸಮಭಾವ ಗಾಂಧೀಜಿಯವರ ಚಿಂತನೆಗಳಾಗಿರಲಿಲ್ಲ, ಅದು ಜೀವನ ಮಾರ್ಗವಾಗಿತ್ತು. ಜಗತ್ತು ಹಿಂಸೆ, ಅಶಾಂತಿಗಳ ದಾಳಿಗೆ ಒಳಗಾದಾಗಲೆಲ್ಲ ಮತ್ತೆ ಮತ್ತೆ ನೆನಪಾಗುವವರು ಗಾಂಧಿ.

CM Siddharamaiah ಇಂದು ಮಹಾತ್ಮ ಗಾಂಧಿಯವರ ಜನ್ಮದಿನ. ಅವರ ಸೇವೆ, ಸಮರ್ಪಣಾಭಾವ, ತ್ಯಾಗ, ಬಲಿದಾನವನ್ನು ಅತ್ಯಂತ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ ಎಂದು ಸಿದ್ಧರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ
ಸಂದೇಶ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...