Thursday, June 18, 2026
Thursday, June 18, 2026

Kateel Ashok Pai Memorial Institute ಗಾಂಧೀಜಿಯವರ ಸತ್ಯ,ಸಹಕಾರ, ಸಹೋದರತ್ವ, ಸ್ವಾವಲಂಬನೆ ಬಿಂಬಿಸಿದ ಗಾಂಧಿ ಜಯಂತಿ.

Date:

Kateel Ashok Pai Memorial Institute ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಹಾತ್ಮ ಗಾಂಧಿಯವರ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಆಡಳಿತಾಧಿಕಾರಿಗಳಾದ ಪ್ರೊ ರಾಮಚಂದ್ರ ಬಾಳಿಗಾ ಅವರು ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜೀವನ ಮೌಲ್ಯ ಹಾಗೂ ದೇಶ ಪ್ರೇಮದ ಕುರಿತು NSS ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಮೋಹನ್ ಕುಮಾರ್ ಅವರು ಮಾತನಾಡಿದರು.

Kateel Ashok Pai Memorial Institute ಅಧ್ಯಕ್ಷತೆಯನ್ನು ವಹಿಸಿದ ಸಂಧ್ಯಾಕವೇರಿ ಅವರು “ಕರ್ನಾಟಕದಲ್ಲಿ ಗಾಂಧಿ” ಎಂಬ ಪುಸ್ತಕದಿಂದ ಗಾಂಧೀಜಿಯವರು ಭದ್ರಾವತಿಗೆ ಭೇಟಿ ನೀಡಿದ ಸಂಧರ್ಭದ ಕುರಿತ ಲೇಖನವನ್ನು ಓದಿ ಹೇಳಿದರು.

ವಿಧ್ಯಾರ್ಥಿಗಳು,ಉಪನ್ಯಾಸಕರು ಹಾಗೂ ಎಲ್ಲಾ ಸಿಬ್ಬಂದಿಗಳು ತನಮಯಿ ಹಾಗೂ ತಂಡದ ನೇತೃತ್ವದಲ್ಲಿ ಸುಶ್ರಾವ್ಯವಾಗಿ ಭಜನೆಗಳನ್ನು ಹಾಡಿದರು.
ತರುವಾಯ ಎಲ್ಲರೂ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಹಾತ್ಮಗಾಂಧಿಯವರ ಸತ್ಯ ,ಸಹಕಾರ,ಸಹೋದರತ್ವ, ಸ್ವಾವಲಂಬನೆ ಕುರಿತು ಅವಲೋಕನ ಹಾಗೂ ಅನುಭವ ಹೊಂದುವ ಕಾರ್ಯಕ್ರಮ ಇದಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...