Wednesday, May 6, 2026
Wednesday, May 6, 2026

Adichunchanagiri Mahasansthan Mutt ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆಯಲ್ಲಿ – ಕುಶಾಲ್ ಎಂ.

Date:

Adichunchanagiri Mahasansthan Mutt ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರ ಆಶ್ರಯದಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮತ್ತು ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾನ್ವಿತ ಕ್ರೀಡಾಪಟು ಕುಶಾಲ್ ಎಂ. ತಾಲೂಕು ಮತ್ತು ಜಿಲ್ಲಾಮಟ್ಟದ 45 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮ ಸ್ಪರ್ಧೆಯನ್ನು ನೀಡಿ,ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾನೆ.
Adichunchanagiri Mahasansthan Mutt ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಈ ಪ್ರತಿಭೆಯು ಕ್ರೀಡೆಯ ಜೊತೆಗೆ, ಓದಿನಲ್ಲಿಯೂ ಪ್ರತಿಭಾನ್ವಿತನಾಗಿರುತ್ತಾನೆ.ಗುರುಪುರದಲ್ಲಿ ವಾಸವಿರುವ ಮೋಹನ್ ಕೆ. ಎಸ್. ಮತ್ತು ಉಮಾದೇವಿ ದಂಪತಿಗಳ ಪುತ್ರನಾಗಿರುತ್ತಾನೆ.
ಈ ಕ್ರೀಡಾ ಪ್ರತಿಭೆಯ ಮುಂದಿನ ಕ್ರೀಡಾ ಜೀವನ ಯಶಶ್ವಿಯಾಗಲೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...