Sunday, August 2, 2026
Sunday, August 2, 2026

Madhu Bangarappa ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ತಾ.ಪಂ. ಕಟ್ಟಡ ಲೋಕಾರ್ಪಣೆ

Date:

Madhu Bangarappa ಶಿವಮೊಗ್ಗ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ನೂತನ ತಾಲ್ಲೂಕು ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ತಾಲ್ಲೂಕು ಪಂಚಾಯಿತಿ ನೂತನ ಕಟ್ಟಡವನ್ನು ಬಹಳ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ ಎಂದ ಅವರು ಇನ್ನು ಬಾಕಿ‌ ಉಳಿದಿರುವ ಕಾಮಗಾರಿಗಳಿಗೆ, ಹೆಚ್ಚಿನ ಅನುದಾನ ತಂದು ಉಳಿದ ಕೆಲಸವನ್ನು ಸಂಪೂರ್ಣ ಮಾಡಲು ಸಹಕರಿಸುವುದಾಗಿ ಇದೇ ವೇಳೆ ಭರವಸೆ ನೀಡಿದರು.
Madhu Bangarappa ಕಾರ್ಯಪಾಲಕ ಅಭಿಯಂತರರಾದ ಬಿ.ಎನ್. ಮಂಜುನಾಥ್ ಮಾತನಾಡಿ, ತಾ.ಪಂ. ಕಟ್ಟಡವು ರೂ.2 ಕೋಟಿ ಮೊತ್ತದಲ್ಲಿ ಅನುಮೋದನೆಗೊಂಡಿದ್ದು, 1.72 ಕೋಟಿ ಮೊತ್ತದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಹಾಗೂ ಕಟ್ಟಡಕ್ಕೆ ತಾರಸಿ ಶೀಟ್ ಸೇರಿದಂತೆ ಇನ್ನೂ ಕೆಲವು ಕಾಮಗಾರಿಗಳು ಬಾಕಿ ಉಳಿದಿದ್ದು, ಸಚಿವರು ಅನುದಾನ ಬಿಡುಗಡೆ ಮಾಡಿಸಿಕೊಡಬೇಕೆಂದು ಮನವಿ‌ ಮಾಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ತಾ.ಪಂ. ಕಟ್ಟಡವನ್ನು ಸುಸಜ್ಜಿತವಾಗಿ‌ ನಿರ್ಮಿಸಲಾಗಿದೆ. ಮುಂಬರುವ ದಿನಗಳಲ್ಲಿ ತಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಯ್ಕೆಯಾಗಿ ಇಲ್ಲಿ ಉತ್ತಮವಾದ ಆಡಳಿತ ನಡೆಸುವಂತಾಗಲಿ ಎಂದು ಹಾರೈಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ್, ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಮಧು ಹೆಚ್.ಎಂ, ಜಿ.ಪಂ.ಸಿಇಓ ಹೇಮಂತ್, ತಾಲ್ಲೂಕು ಪಂಚಾಯತ್ ಇಓ ತಾರಾ, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...