Sunday, February 1, 2026
Sunday, February 1, 2026

Sankara Eye Hospital ಸೈಲ್- ವಿಐಎಸ್ಎಲ್ ಘಟಕದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ ತಪಾಸಣೆ

Date:

Sankara Eye Hospital ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಮತ್ತು ಗಿISಐ ಆಸ್ಪತ್ರೆಯರ ಸಹಯೋಗದೊಂದಿಗೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ದಿನಾಂಕ ೧೫ನೇ ಅಕ್ಟೋಬರ್, ೨೦೨೫ ರಂದು ಆಯೋಜಿಸಲಾಗಿತ್ತು ೧೪೩ ಕ್ಕೂ ಹೆಚ್ಚು ಸಂಖ್ಯೆಯ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಈ ಶಿಬಿರದ ಸೌಲಭ್ಯವನ್ನು ಪಡೆದರು. ಈ ಶಿಬಿರದಲ್ಲಿ ರಕ್ತದೊತ್ತಡ (ಬಿಪಿ) ತಪಾಸಣೆ, ಉಖಃS (ಮಧುಮೇಹ) ತಪಾಸಣೆ, ಟಿಟ್ಮಸ್ ಕಣ್ಣಿನ ತಪಾಸಣೆ (ಸಮೀಪ ದೃಷ್ಠಿ, ದೂರ ದೃಷ್ಠಿ, ಬಣ್ಣ ದೃಷ್ಠಿ, ಬೈನಾಕುಲರ್ ಮೌಲ್ಯಮಾಪನ ಮತ್ತು ಟ್ರಯಲ್ ಸೆಟ್/ ವಕ್ರೀಭವನ ತಪಾಸಣೆ ಸೇರಿದಂತೆ) ಅನೇಕ ತಪಾಸಣೆಗಳನ್ನು ಮಾಡಲಾಯಿತು. ಡಾ|| ಮೇಘನ, ನೇತ್ರ ತಜ್ಞರು, ಶಂಕರ ಕಣ್ಣಿನ ಆಸ್ಪತ್ರೆ ತಜ್ಞ ವೈಧ್ಯೆ ಸಲಹೆ ನೀಡಿದರು.

Sankara Eye Hospital ಈ ಶಿಬಿರದಲ್ಲಿ ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಸಹಾಯಕರಾದ ಶ್ರೀ ಹರ್ಷ, ಶ್ರೀ ಸೋಮೇಶ್ ಮತ್ತು ಚೇತನ, ವಿಐಎಸ್‌ಎಲ್‌ನಿಂದ ಶ್ರಿ ಅಲೆನ್ ಪಿಂಟೋ, ಶ್ರೀಮತಿ ಪುಷ್ಪಲತಾ, ಶ್ರೀ ಮೋಹನ್, ಶ್ರೀ ನವೀನ್, ಶ್ರೀ ಉಮೇಶ್, ಶ್ರೀ ರಮೇಶ್ ಮತ್ತು ಶ್ರೀ ಎಮ್.ಎಲ್. ಯೋಗೀಶ್, ಕಿರಿಯ ಅಧಿಕಾರಿ (ಮಾನವ ಸಂಪನ್ಮೂಲ) ಸಹಕಾರ ನೀಡಿದರು. ವಿಐಎಸ್‌ಎಲ್‌ನ ಮಾನವ ಸಂಪನ್ಮೂಲ ಇಲಾಖೆ, ಆಸ್ಪತ್ರೆ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಈ ಶಿಬಿರವನ್ನು ಸಂಯೋಜಿಸಿದ್ದವು. ಈ ಕಾರ್ಯಕ್ರಮದ ಆಯೋಜನೆಯ ಮೇಲುಸ್ತುವಾರಿಯನ್ನು ವಿಐಎಸ್ ಎಲ್ ಆಸ್ಪತ್ರೆಯ ಹೆಚ್ಚುವರಿ ಮುಖ್ಯ ವೈಧ್ಯಾಧಿಕಾರಿ ಡಾ|| ಸುಜೀತ್ ಕುಮಾರ್ ಮತ್ತು ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಹೆಚ್. ಆರ್ ಮತ್ತು ಸಾರ್ವಜನಿಕ ಸಂಪರ್ಕ) ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...