Sunday, February 1, 2026
Sunday, February 1, 2026

Shimoga News ಶಿವಮೊಗ್ಗದ ಸಾಂಸ್ಕೃತಿಕ ಸೇವಾಕ್ಷೇತ್ರದ ಮಹಿಳೆ ಶಾಂತಾಶೆಟ್ಟಿಗೆ ಕದಂಬ ಕಲಾರಾಧಕ ಪ್ರಶಸ್ತಿ

Date:

Shimoga News ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಗುರುತಿಸಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಶಿವಮೊಗ್ಗ ಜಿಲ್ಲಾಧ್ಯಕ್ಷೆ ಶಾಂತಾ ಎಸ್.ಶೆಟ್ಟಿ ಅವರಿಗೆ ಕದಂಬ ಕಲಾರಾಧಕ ಪ್ರಶಸ್ತಿ ಲಭಿಸಿದೆ.

ಕದಂಬ ಕಲಾ ಸಾಂಸ್ಕೃತಿಕ ಪರಿಷತ್, ಕರ್ನಾಟಕ ಸುಗಮ ಸಂಗೀತ ಪರಿಷತ್ ಉತ್ತರ ಕನ್ನಡ ಜಿಲ್ಲಾ ಸಹಭಾಗಿತ್ವದಲ್ಲಿ ಶಿರಸಿಯಲ್ಲಿ ಆಯೋಜಿಸಿದ್ದ ಕಾವೆಂಶ್ರೀ ಕಾವ್ಯಯಾನ ಭಾವಗಾನ 1, ಶತಕಂಠ ಗಾಯನ ಮತ್ತು ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕದಂಬ ಕಲಾರಾಧಕ 2025 ರಾಜ್ಯಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

Shimoga News ಕದಂಬ ರತ್ನಾಕರರ ಹೊನ್ನುಡಿ ಕವನ ಸಂಕಲನ ಬಿಡುಗಡೆಯಾಯಿತು. ಕದಂಬ ಕಲಾರಾಧಕ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕದಂಬ ರತ್ನಾಕರ, ಬಿ.ಎನ್.ವಾಸರೆ ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ಶಾಂತಾ ಶೆಟ್ಟಿ ಅವರ ಸಾಂಸ್ಕೃತಿಕ ಸೇವೆಯನ್ನ ಪರಿಗಣಿಸಿ ಕದಂಬ ಕಲಾರಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದುದ್ದಕ್ಕೂ ಡಾ. ಕಾವೆಂಶ್ರೀ ಗೀತೆಗಳು ಶತಕಂಠದನಿಯಲ್ಲಿ ಝೇಂಕರಿಸಿತು. ಬೇರೆ ಬೇರೆ ಜಿಲ್ಲೆಯಿಂದ ಬಂದಿದ್ದ ಗಾಯಕರು ಹಾಡಿ ಮೋಡಿ ಮಾಡಿದರು. ವೇದಿಕೆಯಲ್ಲಿ ಶಿಕ್ಷಣ ತಜ್ಞ ಕೆ.ಎನ್.ಹೊಸ್ಮನಿ, ಡಾ. ವೆಂಕಟೇಶ ನಾಯ್ಕ, ಭೀಮಾಶಂಕರ್ ಕುಲಕರ್ಣಿ, ದಿವ್ಯಾ ಶೇಟ್ ಕದಂಬ ಹಾಗೂ ಜ್ಯೋತಿ ರತ್ನಾಕರ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...