ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಎಂ.ಆಂಜನಪ್ಪ ಅವರು ನಿಗಮದ ಪ್ರಧಾನ ಕಛೇರಿಯಲ್ಲಿಅಧಿಕಾರ ಸ್ವೀಕರಿಸಿದರು.
ಕರ್ನಾಟಕ ರಾಜ್ಯ ಬೀಜ ನಿಗಮವು ಸರ್ಕಾರಿ ಅಂಗ ಸಂಸ್ಥೆಯಾಗಿದ್ದು, ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತಕ್ಕೆ ನೂತನ ಅಧ್ಯಕ್ಷರಾಗಿ ಎಂ.ಆಂಜನಪ್ಪ ರವರನ್ನು ನೇಮಿಸಿ ಸರ್ಕಾರವು 2025 ನೇ ಅಕ್ಟೋಬರ್ 16 ರಂದು ಆದೇಶ ಹೊರಡಿಸಿರುತ್ತದೆ.
ಶ್ರೀಯುತರು ಅಧಿಕಾರ ಸ್ವೀಕಾರ ಸ್ವೀಕರಿಸಿದ ಸಮಯದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್.ಕೆ.ಜಿ. ಹಾಗೂ ನಿಗಮದ ಇನ್ನಿತರೆ ಹಿರಿಯ ಅಧಿಕಾರಿ ವರ್ಗ ಸೇರಿದಂತೆ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೇಶವರೆಡ್ಡಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ್ ಅವರು ಉಪಸ್ಥಿತರಿದ್ದರು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
