Thursday, March 19, 2026
Thursday, March 19, 2026

U.T. Khader Farid ಸ್ಪೀಕರ್ ಯು.ಟಿ.ಖಾದರ್ ನೇತೃತ್ವದ ತಂಡದಿಂದ ನಾರ್ವೆ ಸಂಸತ್ತಿಗೆ ಭೇಟಿ

Date:

U.T. Khader Farid ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು ಇಂದಿಗೂ ಶಾಶ್ವತ ಪ್ರಜಾಪ್ರಭುತ್ವದ ಮಾದರಿಯಾಗಿ ಉಳಿದಿದೆ. ಈ ಸಂದರ್ಭದಲ್ಲಿ ಅವರು ನಾರ್ವೆಯ ಮಾಜಿ ಸಚಿವರೂ ಹಾಗೂ ಮಾಜಿ ಸಂಸದರೂ ಆಗಿದ್ದ ಹಿಮಾಂಶು ಗುಲೇಟ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು.

ಭೇಟಿಯ ವೇಳೆ, ನಾರ್ವೆಯ ಇತಿಹಾಸ, ಸಂವಿಧಾನ, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ, ಎರಡೂ ರಾಷ್ಟ್ರಗಳ ಸಂಸತ್ತಿನ ಕಾರ್ಯನಿರ್ವಹಣಾ ವಿಧಾನಗಳು, ಜನತಾಂತ್ರಿಕ ಪ್ರಕ್ರಿಯೆಗಳ ವಿನ್ಯಾಸ ಹಾಗೂ ಸಂಸದೀಯ ಅಧಿವೇಶನಗಳ ನಿರ್ವಹಣೆ ಕುರಿತಂತೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು. ಸಭಾಧ್ಯಕ್ಷರಾದ
ಖಾದರ್ ಫರೀದ್ ಅವರು, ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಪ್ರಮುಖ ಯೋಜನೆಗಳನ್ನು ವಿವರಿಸಿದರು.

ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ನಾರ್ವೆಯ ಪ್ರಗತಿಶೀಲ ಜನತಾಂತ್ರಿಕ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕರ್ನಾಟಕ ಮತ್ತು ನಾರ್ವೆ ದೇಶದ ನಡುವೆ ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಹಕಾರ ವೃದ್ಧಿಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

U.T. Khader Farid ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಹಾಗೂ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...