Monday, February 2, 2026
Monday, February 2, 2026

Department of Kannada and Culture ಚೆನ್ನಮ್ಮನವರು ಜನಸಾಮಾನ್ಯರನ್ನ ಒಗ್ಗೂಡಿಸಿ ದೇಶದ ಒಳಿತಿಗೆ, ಸ್ವತಂತ್ರ ಹೋರಾಟ ಮಾಡಿದವರು- ಎಸ್.ಎನ್.ಚನ್ನಬಸಪ್ಪ

Date:

Department of Kannada and Culture ಜಾತಿ ಮೀರಿ ಬದುಕಿದ್ದ ಕಿತ್ತೂರು ರಾಣಿ ಚೆನ್ನಮ್ಮ ತನ್ನ ಸಾಮ್ರಾಜ್ಯದಲ್ಲಿ ಜನಸಾಮಾನ್ಯರನ್ನು ಒಗ್ಗೂಡಿಸಿಕೊಂಡು ಈ ದೇಶದ ಒಳಿತಿಗಾಗಿ ಸ್ವತಂತ್ರ ಹೋರಾಟ ಮಾಡಿದರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ ಹೋರಾಟವನ್ನು ನೆನಪು ಮಾಡುವ ದಿಸೆಯಲ್ಲಿ, ನಮ್ಮೆಲ್ಲರ ಮುಂದಿನ ಜೀವನ ಹೇಗೆಲ್ಲಾ ಆದರ್ಶಪ್ರಾಯವಾಗಿರಬೇಕೆಂಬ ಉದ್ದೇಶದಲ್ಲಿ ರಾಜ್ಯ ಸರ್ಕಾರ ಇಂತಹ ಮಹನೀಯರ ಜಯಂತಿಯನ್ನು ಮಾಡುತ್ತಿದ್ದು, ನಾವೆಲ್ಲರೂ ಅವರ ಜೀವನಾನುಕ್ರಮವನ್ನು ಅರಿತುಕೊಳ್ಳಬೇಕಿದೆ ಎಂದರು.
ಸ್ವಾತಂತ್ರ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಕೊಡುಗೆ ಅಪಾರ. ಬ್ರಿಟಿಷರು ಹಾಗೂ ಮೊಘಲರ ವಿರುದ್ದ ಹೋರಾಡಿದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಸದಾ ಸಮಾಜಕ್ಕೆ ಒಳಿತಾಗಬೇಕೆಂದು ಯೋಚಿಸುತ್ತಿದ್ದರು. ಜಾತಿ ಭೇದದ ಅಂಕೆ ಇಲ್ಲದೆ ಎಲ್ಲರನ್ನೂ ದೇಶದ ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಇವರು ಸಮಗ್ರವಾಗಿ ಯೋಚಿಸಿ ರಾಜ್ಯಭಾರ ಮಾಡಿದರು ಎಂದರು.
ಕಿತ್ತೂರು ರಾಣಿಯ ಚೆನ್ನಮ್ಮನ ಆದರ್ಶವನ್ನು ಇಂದಿನ ಯುವ ಪಿಳಿಗೆಗಳಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಇದರಿಂದ ಅವರ ಹೋರಾಟದ ಬದುಕು, ಜೀವನಶೈಲಿಯನ್ನು ಅರಿತುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪಗೊಳ್ಳಲು ಸಾಧ್ಯವಾಗುತ್ತದೆ ಎಂದರು.
Department of Kannada and Culture ಕನ್ನಡ ಉಪನ್ಯಾಸಕ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಜಿಲ್ಲಾ ಸಂಚಾಲಕರಾದ ಡಾ.ಗಣೇಶ ಆರ್. ಕೆಂಚನಾಲ್ ವಿಶೇಷ ಉಪನ್ಯಾಸ ನೀಡಿ, 1778 ಅ.23 ರಂದು ಬೆಳಗಾವಿಯ ಕಾಕತೀಯ ಹಳ್ಳಿಯಲ್ಲಿ ಜನಿಸಿದ ಚೆನ್ನಮ್ಮ, ಆರಂಭದಲ್ಲೆ ಕತ್ತಿವರೆಸಿ ಸೇರಿದಂತೆ ಅನೇಕ ಯುದ್ದೋಪಾಯವನ್ನು ಕಲಿತಳು. ತನ್ನ 15 ನೇ ವಯಸ್ಸಿನಲ್ಲಿ ಮಲ್ಲಸರ್ಜನನ 2 ನೇ ಮಡದಿಯಾಗಿ ವಿವಾಹವಾದರು. ನಂತರ ರಾಜ್ಯದ ಜವಾಬ್ದಾರಿಯನ್ನು ಹೊತ್ತ ಚೆನ್ನಮ್ಮ 1824 ರಲ್ಲಿ ದತ್ತುಪುತ್ರನನ್ನು ಸ್ವೀಕಾರ ಮಾಡುವ ಮೂಲಕ ಬ್ರಿಟಿಷರ ನಿಯಮವನ್ನು ಮುರಿದಳು. ಇದರಿಂದ ಕೋಪಗೊಂಡ ಬ್ರಿಟಿಷ್ ಅಧಿಕಾರಿ ತಾಕ್ರೆ ಕಿತ್ತೂರಿನ ಮೇಲೆ ಯುದ್ದ ಸಾರಿದ, ಚೆನ್ನಮ್ಮ ತಾಕ್ರೆ ಸೈನ್ಯವನ್ನು ಯುದ್ದದಲ್ಲಿ ಸೋಲಿಸಿದಳು. ಆ ಮೂಲಕ ದೇಶದಲ್ಲಿ ಬ್ರಿಟಿಷರನ್ನು ಪ್ರಥಮ ಬಾರಿಗೆ ಸಂಪೂರ್ಣವಾಗಿ ಸೋಲಿಸಿ ಕೀರ್ತಿ ಕಿತ್ತೂರು ರಾಣಿ ಚೆನ್ನಮ್ಮರವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ರಾಣಿ ಚೆನ್ನಮ್ಮ ಸದಾ ದೇಶ ಸೇವೆಗಾಗಿ ಹಾತೊರಿಯುತ್ತಿದ್ದಳು. ಮೊಘಲರು, ಬ್ರಿಟಿಷರ ವಿರುದ್ದ ದಿಟ್ಟವಾಗಿ ಹೋರಾಡಿದ್ದಳು. ದೇಶ, ರಾಜ್ಯ ಬಂದಾಗ ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ತಿಳಿಸಿದ್ದ ಅವರು ರಾಜ್ಯಭಾರ ಒಂದು ಕುಟುಂಬಕ್ಕೆ ಮಾತ್ರ ಸಿಮೀತವಾಗಬಾರದು, ಅದು ಜನಸಾಮಾನ್ಯರಿಗೂ ತಲುಪಬೇಕೆಂದ ಆಶಯವನ್ನು ಹೊಂದಿದ್ದಳು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಮಹೇಶ್ವರಪ್ಪ, ಸಂಘಟನೆಯ ಕಾರ್ಯದರ್ಶಿ ಎಂ.ಸಿದ್ದೇಶ್ ಬೇಗೂರು, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಪ್ಪ ಮೇಡ್ಲೀರಿ, ಶಿವಮೊಗ್ಗ ನಗರದ ಅಧ್ಯಕ್ಷ ಟಿ.ಎಂ.ಕುಮಾರ್, ಪೊಲೀಸ್ ಹೆಚ್ಚುವರಿ ಅಧೀಕ್ಷಕರಾದ ರಮೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ಹಾಗೂ ಸಮಾಜದ ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...