Department of Industry and Commerce ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು., ಬೆಂಗಳೂರು ಹಾಗೂ ಮಾಚೇನಹಳ್ಳಿ ಕೈಗಾರಿಕೆಗಳ ಸಂಘ ಇವರುಗಳ ಸಹಯೋಗದಲ್ಲಿ ಅ.28 ರಂದು ಬೆಳಗ್ಗೆ 1.30ಕ್ಕೆ ಶಿವಮೊಗ್ಗದ ಮಾಚೇನಹಳ್ಳಿಯ ಶಾಂತಲಾ ಸ್ಪೆರೋಕ್ಯಾಸ್ಟ್ ಲರ್ನಿಂಗ್ ಸೆಂಟರ್ನಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ ರಫ್ತು ಉತ್ತೇಜನ ಮತ್ತು ಸುಗಮಗೊಳಿಸುವಿಕೆಗಾಗಿ ಒಂದು ದಿನದ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್. ಉದ್ಘಾಟಿಸಲಿದ್ದಾರೆ.
Department of Industry and Commerce ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಹಾಗೂ ವಿ.ಟಿ.ಪಿ.ಸಿ., ಬೆಂಗಳೂರು ಜಂಟಿ ನಿರ್ದೇಶಕ ಬಾಬು ಜಗದೀಶ್ ಸಿ.ಎಸ್., ಲೀಡ್ ಬ್ಯಾಂಕ್ ಅಧಿಕಾಋಇ ಹೊನ್ನಪ್ಪ ಬಿ. ಇವರುಗಳು ಉಪಸ್ಥಿತರಿರಲಿದ್ದಾರೆ.
