Monday, February 2, 2026
Monday, February 2, 2026

CM Siddharamaiah ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನು ಬಲಗೊಳಿಸಬೇಕಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddharamaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ ಪೂರ್ವಭಾವಿ ಸಭೆ ನಡೆಸಲಾಯಿತು.

ಕರ್ನಾಟಕ ಸಹಕಾರಿ ರತ್ನ  ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದಲ್ಲವೇ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ಅಥವಾ ಜಿಲ್ಲೆಗೆ ಒಂದರಂತೆ  ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳು ಇರಲಿ .
ಸಮಿತಿಯ ತೀರ್ಮಾನದಂತೆ ನೀಡಿ ಎನ್ನುವ ಸಲಹೆ ನೀಡಿದರು .

ಸಹಕಾರ ಇಲಾಖೆ ಅನಿವಾರ್ಯ ಕಾರಣಗಳಿಂದ ನನ್ನ ಸುಪರ್ದಿಗೆ ಬಂದಿದೆ. ಸಹಕಾರಿ ಕ್ಷೇತ್ರವನ್ನು ಮೊದಲಿನಿಂದಲೂ ಬೆಂಬಲಿಸಿ ಕೊಂಡು ಬಂದಿದ್ದೇನೆ ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನು 
ಬಲಗೊಳಿಸಬೇಕಿದೆ.

ನಾನು ಶಾಸಕರಾಗಿದ್ದ ಸಂದರ್ಭದಲ್ಲಿ
ಹಾಲು ಉತ್ಪಾದಕರ ಸಂಘಗಳು ರೈತರ ಅಧೀನದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಈಗಲೂ ಅದರಂತೆ ನಡೆಯುತ್ತಿದೆ.
ಮೊದಲಿನಿಂದಲೂ ಈ ಕ್ಷೇತ್ರವನ್ನು ಬೆಂಬಲಿಸಿಕೊಂಡೇ ಬಂದಿದ್ದೇನೆ.

1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ.ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು.ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ 
ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ.ಬ್ಯಾಂಕಿಂಗ್ ವ್ಯವಸ್ಥೆ ನಿಯಂತ್ರಣ ಕಾಯ್ದೆ ಪ್ರಕಾರ
ಸಹಕಾರಿ ಬ್ಯಾಂಕ್ ಗಳ ಮ್ಯಾನೇಜರ್ ಗಳ ಸೇವಾವಧಿ ಯನ್ನು ಮರು ಪರಿಶೀಲಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಭೆಯಲ್ಲಿ ಮುಖ್ಯಮಂತ್ರಿಗಳನ್ನು ಕೋರಲಾಯಿತು.ರಾಜ್ಯದ ನೇಕಾರ, ಬಡಗಿ, ಮೀನುಗಾರರ ಸೊಸೈಟಿ ಗಳಂಥ ವೃತ್ತಿಮೂಲ ಸಂಘಗಳನ್ನು ಸಬಲಗೊಳಿಸಬೇಕು.

CM Siddharamaiah ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು  ಕೇಂದ್ರ ಸರ್ಕಾರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಸಚಿವರಾದ ಎಚ್.ಕೆ. ಪಾಟೀಲ್, ಮಾಜಿ ಸಚಿವರಾದ ಕೆ.ಎನ್ ರಾಜಣ್ಣ, ಎಸ್.ಟಿ. ಸೋಮಶೇಖರ್, ಶಾಸಕರಾದ ವೆಂಕಟೇಶ್, ರಾಘವೇಂದ್ರ ಹಿಟ್ನಾಳ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಕಾರ ಮಹಾ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...