Thursday, June 18, 2026
Thursday, June 18, 2026

ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಇ ಶ್ರಮ ಕಾರ್ಡ್ ಪಡೆಯಿರಿ- ಕೆ.ಶಂಭುಲಿಂಗ

Date:

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಶಿವಮೊಗ್ಗ ಹಾಸನ ಚಿಕ್ಕಮಂಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ಕೆ ರವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಈ ವಿಶೇಷ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಕೆ ಶಂಭುಲಿಂಗ ರವರ ನೇತೃತ್ವದಲ್ಲಿ ಪತ್ರಿಕಾ ವಿತರಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ, ಹೋರಾಟದ ರೂಪುರೇಷೆಗಳ ಬಗ್ಗೆ, ಸಭೆ ಯಲ್ಲಿ ಮಾತನಾಡಿದ ಶಂಭುಲಿಂಗ ರವರು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಕಡ್ಡಾಯವಾಗಿ ಈ ಶ್ರಮ ಕಾರ್ಡನ್ನು ಮಾಡಿಸಿಕೊಳ್ಳುವಂತೆ ಕರೆ ನೀಡಿದರು.

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ, ಸರ್ಕಾರದಿಂದ ಪಡೆಯಬೇಕಾಗಿರುವ ಸೌಲಭ್ಯಗಳ ಬಗ್ಗೆ, ಸಭೆಯಲ್ಲಿ ಮಾಹಿತಿ ನೀಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಚರ್ಚೆ ಮಾಡಿದರು.

ಈ ವೇಳೆ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಎನ್, ಮಾಲತೇಶ್ ರವರು ಮಾತನಾಡಿ ಪತ್ರಿಕಾ ವಿತರಕರಿಗೆ ಸಿಗಬೇಕಾದ ಸೌಲಭ್ಯಗಳು ಸೇರಿದಂತೆ ಅಗತ್ಯ ಬೇಡಿಕೆಗಳ ಬಗ್ಗೆ ರಾಜ್ಯಮಟ್ಟದಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಜಿಲ್ಲೆಯ ಏಳು ತಾಲೂಕುಗಳಿಂದಲೂ ಕೂಡ ಪತ್ರಿಕಾ ವಿತರಕರನ್ನು ಸಂಘಟಿಸಿ ರಾಜ್ಯಾಧ್ಯಕ್ಷರ ಕೈ ಬಲಪಡಿಸಲು ಸಿದ್ದರಿದ್ದೇವೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಕ್ತರ್ ಆಹ್ಮದ್ (ನಾಜೀರ್ ರವರು ಸಭೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪತ್ರಿಕಾ ವಿತರಕರ ಮುಖಂಡರನ್ನು ಸ್ವಾಗತಿಸಿದರು.

ಶಿವಮೊಗ್ಗ ಜಿಲ್ಲಾ ಗೌರವಾಧ್ಯಕ್ಷ ಹುಲಗಿ ಕೃಷ್ಣರವರು ವಂದನಾರ್ಪಣೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪತ್ರಿಕಾ ವಿತರಕರು, ಚಿಕ್ಕಮಂಗಳೂರು ಜಿಲ್ಲೆಯ ಪತ್ರಿಕಾ ವಿತರಕರು, ಮತ್ತು ಹಾಸನ ಜಿಲ್ಲೆಯ ಪತ್ರಿಕಾ ವಿತರಕ ಮುಖಂಡರು ಕೂಡ ಭಾಗವಹಿಸಿದ್ದರು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಉಪಾಧ್ಯಕ್ಷರಾದ ರಾಮು,ಜಿ, ನಾಗಭೂಷಣ್ ಭದ್ರಾವತಿ ಪರಶುರಾಮ್ ,ರಾವ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್, ಮಧು, ಸೋಮಶೇಖರ್, ರಾಜಾವರ್ಮಾ ಜೈನ್, ದುರ್ಘೋಜಿ, ಪಾರ್ಥ ಬನ್, ಪ್ರಶಾಂತ್, ಶಿಕಾರಿಪುರದ ತಾಲೂಕು ಅಧ್ಯಕ್ಷ ಗಜೇಂದ್ರ, ಎಚ್ಎಫ್ ಯಾವಗಲ್ ಹನುಮಂತಪ್ಪ ಅಜಿದ್ ಉಲ್ಲಾ ಸೇರಿದಂತೆ ಹಲವು ಪತ್ರಿಕಾ ವಿತರಕರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...