Sunday, August 2, 2026
Sunday, August 2, 2026

ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಇ ಶ್ರಮ ಕಾರ್ಡ್ ಪಡೆಯಿರಿ- ಕೆ.ಶಂಭುಲಿಂಗ

Date:

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಶಿವಮೊಗ್ಗ ಹಾಸನ ಚಿಕ್ಕಮಂಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ಕೆ ರವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಈ ವಿಶೇಷ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಕೆ ಶಂಭುಲಿಂಗ ರವರ ನೇತೃತ್ವದಲ್ಲಿ ಪತ್ರಿಕಾ ವಿತರಕರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ, ಹೋರಾಟದ ರೂಪುರೇಷೆಗಳ ಬಗ್ಗೆ, ಸಭೆ ಯಲ್ಲಿ ಮಾತನಾಡಿದ ಶಂಭುಲಿಂಗ ರವರು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಕಡ್ಡಾಯವಾಗಿ ಈ ಶ್ರಮ ಕಾರ್ಡನ್ನು ಮಾಡಿಸಿಕೊಳ್ಳುವಂತೆ ಕರೆ ನೀಡಿದರು.

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ, ಸರ್ಕಾರದಿಂದ ಪಡೆಯಬೇಕಾಗಿರುವ ಸೌಲಭ್ಯಗಳ ಬಗ್ಗೆ, ಸಭೆಯಲ್ಲಿ ಮಾಹಿತಿ ನೀಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಚರ್ಚೆ ಮಾಡಿದರು.

ಈ ವೇಳೆ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಎನ್, ಮಾಲತೇಶ್ ರವರು ಮಾತನಾಡಿ ಪತ್ರಿಕಾ ವಿತರಕರಿಗೆ ಸಿಗಬೇಕಾದ ಸೌಲಭ್ಯಗಳು ಸೇರಿದಂತೆ ಅಗತ್ಯ ಬೇಡಿಕೆಗಳ ಬಗ್ಗೆ ರಾಜ್ಯಮಟ್ಟದಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಜಿಲ್ಲೆಯ ಏಳು ತಾಲೂಕುಗಳಿಂದಲೂ ಕೂಡ ಪತ್ರಿಕಾ ವಿತರಕರನ್ನು ಸಂಘಟಿಸಿ ರಾಜ್ಯಾಧ್ಯಕ್ಷರ ಕೈ ಬಲಪಡಿಸಲು ಸಿದ್ದರಿದ್ದೇವೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಕ್ತರ್ ಆಹ್ಮದ್ (ನಾಜೀರ್ ರವರು ಸಭೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪತ್ರಿಕಾ ವಿತರಕರ ಮುಖಂಡರನ್ನು ಸ್ವಾಗತಿಸಿದರು.

ಶಿವಮೊಗ್ಗ ಜಿಲ್ಲಾ ಗೌರವಾಧ್ಯಕ್ಷ ಹುಲಗಿ ಕೃಷ್ಣರವರು ವಂದನಾರ್ಪಣೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪತ್ರಿಕಾ ವಿತರಕರು, ಚಿಕ್ಕಮಂಗಳೂರು ಜಿಲ್ಲೆಯ ಪತ್ರಿಕಾ ವಿತರಕರು, ಮತ್ತು ಹಾಸನ ಜಿಲ್ಲೆಯ ಪತ್ರಿಕಾ ವಿತರಕ ಮುಖಂಡರು ಕೂಡ ಭಾಗವಹಿಸಿದ್ದರು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಉಪಾಧ್ಯಕ್ಷರಾದ ರಾಮು,ಜಿ, ನಾಗಭೂಷಣ್ ಭದ್ರಾವತಿ ಪರಶುರಾಮ್ ,ರಾವ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್, ಮಧು, ಸೋಮಶೇಖರ್, ರಾಜಾವರ್ಮಾ ಜೈನ್, ದುರ್ಘೋಜಿ, ಪಾರ್ಥ ಬನ್, ಪ್ರಶಾಂತ್, ಶಿಕಾರಿಪುರದ ತಾಲೂಕು ಅಧ್ಯಕ್ಷ ಗಜೇಂದ್ರ, ಎಚ್ಎಫ್ ಯಾವಗಲ್ ಹನುಮಂತಪ್ಪ ಅಜಿದ್ ಉಲ್ಲಾ ಸೇರಿದಂತೆ ಹಲವು ಪತ್ರಿಕಾ ವಿತರಕರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...