Thursday, March 19, 2026
Thursday, March 19, 2026

S N Channabasappa ರಾಗಿಗುಡ್ಡದಲ್ಲಿ ಸಕಲ ವಿಧಿವಿಧಾನಗಳಿಂದ ಶ್ರೀವಿಘ್ನೇಶ್ವರಸ್ವಾಮಿ ಪ್ರತಿಷ್ಠಾಪನೆ- ಶಾಸಕ ಚೆನ್ನಿ

Date:

S N Channabasappa ಕಳೆದ ಜೂನ್ 5ರಂದು ಶಿವಮೊಗ್ಗ ನಗರದ ರಾಗಿ ಗುಡ್ಡದಲ್ಲಿ ನಡೆದ ಮತಾಂದರ ಹೇಡಿ ಕೃತ್ಯದಿಂದಾಗಿ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ತೀವ್ರ ಧಕ್ಕೆಯುoಟು ಮಾಡಿತ್ತು. ಹಿಂದೂ ಸಮಾಜದ ಮೇಲೆ ನೂರಾರು ವರ್ಷಗಳಿಂದ ನಿರಂತರ ಆಕ್ರಮಣಗಳು ನಡೆಯುತ್ತಾ ಬಂದಿದ್ದರೂ, ಈ ಆಕ್ರಮಣಗಳನ್ನು ಎದುರಿಸಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು ಬಂದಿದ್ದೇವೆ.

ಈ ಘಟನೆಯು ಮತ್ತೊಮ್ಮೆ ಅಖಂಡ ಭಾರತದ ಸಂಸ್ಕೃತಿ, ಪರಂಪರೆ ಮತ್ತು ಹಿಂದುತ್ವದ ಮೌಲ್ಯಗಳನ್ನು ಕಾಪಾಡಿಕೊಂಡು, ಧರ್ಮ ರಕ್ಷಣೆಗಾಗಿ ಹೋರಾಡುವ ನಮ್ಮ ಬದ್ಧತೆಯನ್ನು ಬಲಪಡಿಸಿದೆ. ಪ್ರತಿ ಆಕ್ರಮಣಕ್ಕೂ ನಮ್ಮ ಧರ್ಮ ಮತ್ತು ಸಂಸ್ಕೃತಿಯ ಪುನರುತ್ಥಾನವೇ ಸೂಕ್ತ ಉತ್ತರ. ಈ ನಿಟ್ಟಿನಲ್ಲಿ ಹಿಂದು ಸಂಘಟನೆಗಳು ಹಾಗೂ ಭಕ್ತರು ನಿರಂತರ ಹೋರಾಟ ನಡೆಸಿದ ಪರಿಣಾಮ ಇದರ ಜೊತೆಯಲ್ಲಿ ಸಾಮೂಹಿಕ ಪ್ರಯತ್ನ, ಸಾರ್ವಜನಿಕ ಏಕತೆಯ ಬಲ ಹಾಗೂ ಚುನಾಯಿತ ಪ್ರತಿನಿಧಿಗಳ ಬದ್ಧತೆಯ ಫಲವಾಗಿ ಇಂದು ರಾಗಿ ಗುಡ್ಡದ ದೇವಸ್ಥಾನವು ತನ್ನ ಮೂಲ ಪಾವಿತ್ರ್ಯತೆ ಮತ್ತು ವೈಭವವನ್ನು ಪುನಃ ಪಡೆದುಕೊಂಡಿದೆ.

S N Channabasappa ಇಂದು ದೇವಸ್ಥಾನದ ಆವರಣದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಕಲ ವಿಧಾನಗಳೊಂದಿಗೆ ಶ್ರೀ ವಿಘ್ನೇಶ್ವರನ ಪ್ರತಿಷ್ಠಾಪನ ಮಹೋತ್ಸವವು ಅದ್ದೂರಿಯಾಗಿ ನೆರವೇರಿದೆ.

ಈ ವಿಜಯವು ಕೇವಲ ಒಂದು ದೇವಸ್ಥಾನದ ಪುನರ್ನಿರ್ಮಾಣವಲ್ಲ — ಇದು ಧರ್ಮದ ರಕ್ಷಣೆಗೆ, ನಂಬಿಕೆಯ ಗೌರವಕ್ಕೆ ಮತ್ತು ಹಿಂದೂ ಸಮಾಜದ ಅಸ್ತಿತ್ವದ ಉಳಿವಿಗೆ ನಡೆದ ಹೋರಾಟದ ಸಂಕೇತವಾಗಿದೆ. ಹಿಂದು ಧರ್ಮದ ಗೌರವ ಉಳಿಸುವುದು ನಮ್ಮ ಕರ್ತವ್ಯ, ಅದಕ್ಕಾಗಿ ಹೋರಾಡುವುದು ನಮ್ಮ ಧರ್ಮ. ಎಸ್ ಎನ್ ಚನ್ನಬಸಪ್ಪ ಶಾಸಕರು, ಶಿವಮೊಗ್ಗ ನಗರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...