Sunday, August 2, 2026
Sunday, August 2, 2026

University of Agricultural and Horticultural Sciences ಕೃಷಿಮೇಳ-2025 ರಲ್ಲಿ ಸಾರ್ವಜನಿಕರಿಗೆ ಉಚಿತ ಕಾನೂನು ಸಲಹೆ & ಅರಿವು ನೀಡುವ ಚಟುವಟಿಕೆ- ನ್ಯಾ. ಎಂ.ಎಸ್.ಸಂತೋಷ್

Date:

University of Agricultural and Horticultural Sciences ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ “ಕೃಷಿ ಮೇಳ 2025” ರಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಸಲಹೆ ಮತ್ತು ಕಾನೂನು ಅರಿವನ್ನು ನೀಡುವ ದೃಷ್ಟಿಯಿಂದ ಕಾನೂನು ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಕಾನೂನು ಸಲಹಾ ಕೇಂದ್ರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಎಂ. ಎಸ್. ರವರು ದಿನಾಂಕ 7-11.2025 ರಂದು ಉದ್ಘಾಟಿಸಿದರು. ಈ ಕಾನೂನು ಸಲಹಾ ಕೇಂದ್ರದಲ್ಲಿ ನಾಲ್ಕು ದಿನಗಳ ಕಾಲ ಪ್ರಾಧಿಕಾರದ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು ಹಾಗೂ ಸ್ಟೈಫ್0ಡ್ ವಕೀಲರು ಸಾರ್ವಜನಿಕರಿಗೆ ಕಾನೂನು ಸಲಹೆಯನ್ನು ಮತ್ತು ಕಾನೂನು ಅರಿವನ್ನು ನೀಡುವುದರ ಜೊತೆಗೆ ಕಾನೂನು ಸೇವಾ ಪ್ರಾಧಿಕಾರ ನೀಡುವಂತಹ ಸೇವೆಗಳ ಬಗ್ಗೆ ಜನರಲ್ಲಿ ಅರಿವನ್ನು ಮೂಡಿಸಲು ಪ್ರಾಧಿಕಾರದಿಂದ ನಿಯೋಜಿಸಲಾಗಿದೆ. University of Agricultural and Horticultural Sciences ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾನೂನು ಸಲಹಾ ಕೇಂದ್ರಕ್ಕೆ ಖುದ್ದಾಗಿ ಭೇಟಿಕೊಟ್ಟು ಕಾನೂನು ಸೇವಾ ಪ್ರಾಧಿಕಾರದ ಸೇವೆಗಳ ಬಗ್ಗೆ ಮತ್ತು ಕಾನೂನಿನ ಬಗ್ಗೆ ಅರಿವು ಪಡೆದುಕೊಳ್ಳುವುದರ ಜೊತೆಗೆ ತಮಗಿರುವಂತಹ ಕಾನೂನು ಸಮಸ್ಯೆಗಳ ಬಗ್ಗೆ ಸಲಹೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆದಂತಹ ಶ್ರೀ ಸಂತೋಷ ಎಂ. ಎಸ್. ರವರು ಪ್ರಕಟಣೆಯ ಮೂಲಕ ಕೋರಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...