Thursday, March 19, 2026
Thursday, March 19, 2026

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

Date:

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್ ಇಳಿಜಾರು ಮತ್ತು ಕೂಡು ರಸ್ತೆಯನ್ನು ಸೇರುವ ಜಾಗದಲ್ಲಿ ಹೆಚ್ಚಿನ ವಾಹನಗಳ ಸಂಚಾರದಿಂದ ಹಾಗೂ ಭಾರೀ ವಾಹನಗಳ ಓಡಾಟದಿಂದ ರಸ್ತೆಯು ತೀವ್ರವಾಗಿ ಹಾನಿಗೊಂಡು, ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆಯಾಗುತ್ತಿದ್ದು, ಫ್ಲೈ ಒವರ್ ಇಳಿಜಾರು ಮುಕ್ತಾಯ ಜಾಗದಿಂದ ಮತ್ತು ಚತುಷ್ಪಥಕ್ಕೆ ಕೂಡುವ ರಸ್ತೆಯ ಜಾಗದವರೆಗೆ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ.
ಶಿವಮೊಗ್ಗದಿಂದ-ಹೊನ್ನಾಳಿ-ಹೊಸಪೇಟೆ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ನಗರ-ಎಸ್‌ಎಚ್57 ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಮ್-ಜೆಎಸ್‌ಎಸ್‌ಸಿ ಕಾಲೇಜ್ ಬಳಿ ಬಲಕ್ಕೆ ತಿರುಗಿ- ಕುವೆಂಪುನಗರ-ಶಾಂತಿನಗರದಿಂದ ರಾಜ್ಯ ಹೆದ್ದಾರಿ 25 ಕೂಡುವ ರಸ್ತೆ ಮಾರ್ಗವನ್ನು ಅನುಸರಿಸುವುದು.
ಹಾಗೂ ಹೊನ್ನಾಳಿಯಿಂದ -ಶಿವಮೊಗ್ಗ ಹೊಸಪೇಟೆ ಕಡೆಗೆ ಸಂಚರಿಸುವ ವಾಹನಗಳು ರಾಜ್ಯ ಹೆದ್ದಾರಿ 25 ಶಾಂತಿನಗರ ಕ್ರಾಸ್-ಶಾಂತಿನಗರ ಸರ್ಕಲ್‌ನಿಂದ ಎಡಕ್ಕೆ ತಿರುಗಿ-ರಾಗಿಗುಡ್ಡ ರಸ್ತೆಯಿಂದ-ಕೆಎಸ್‌ಸಿಎ ಸ್ಟೇಡಿಯಮ್ ಬಳಿ ಎಸ್‌ಎಚ್ 57 ಉಷಾ ಸರ್ಸಿಂಗ್ ಹೋಮ್- ಶಿವಮೊಗ್ಗ ನಗರಕ್ಕೆ ಸೇರುವ ರಸ್ತೆ ಮಾರ್ಗವನ್ನು ಬಳಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...