Thursday, June 18, 2026
Thursday, June 18, 2026

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

Date:

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್ ಇಳಿಜಾರು ಮತ್ತು ಕೂಡು ರಸ್ತೆಯನ್ನು ಸೇರುವ ಜಾಗದಲ್ಲಿ ಹೆಚ್ಚಿನ ವಾಹನಗಳ ಸಂಚಾರದಿಂದ ಹಾಗೂ ಭಾರೀ ವಾಹನಗಳ ಓಡಾಟದಿಂದ ರಸ್ತೆಯು ತೀವ್ರವಾಗಿ ಹಾನಿಗೊಂಡು, ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆಯಾಗುತ್ತಿದ್ದು, ಫ್ಲೈ ಒವರ್ ಇಳಿಜಾರು ಮುಕ್ತಾಯ ಜಾಗದಿಂದ ಮತ್ತು ಚತುಷ್ಪಥಕ್ಕೆ ಕೂಡುವ ರಸ್ತೆಯ ಜಾಗದವರೆಗೆ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ.
ಶಿವಮೊಗ್ಗದಿಂದ-ಹೊನ್ನಾಳಿ-ಹೊಸಪೇಟೆ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ನಗರ-ಎಸ್‌ಎಚ್57 ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಮ್-ಜೆಎಸ್‌ಎಸ್‌ಸಿ ಕಾಲೇಜ್ ಬಳಿ ಬಲಕ್ಕೆ ತಿರುಗಿ- ಕುವೆಂಪುನಗರ-ಶಾಂತಿನಗರದಿಂದ ರಾಜ್ಯ ಹೆದ್ದಾರಿ 25 ಕೂಡುವ ರಸ್ತೆ ಮಾರ್ಗವನ್ನು ಅನುಸರಿಸುವುದು.
ಹಾಗೂ ಹೊನ್ನಾಳಿಯಿಂದ -ಶಿವಮೊಗ್ಗ ಹೊಸಪೇಟೆ ಕಡೆಗೆ ಸಂಚರಿಸುವ ವಾಹನಗಳು ರಾಜ್ಯ ಹೆದ್ದಾರಿ 25 ಶಾಂತಿನಗರ ಕ್ರಾಸ್-ಶಾಂತಿನಗರ ಸರ್ಕಲ್‌ನಿಂದ ಎಡಕ್ಕೆ ತಿರುಗಿ-ರಾಗಿಗುಡ್ಡ ರಸ್ತೆಯಿಂದ-ಕೆಎಸ್‌ಸಿಎ ಸ್ಟೇಡಿಯಮ್ ಬಳಿ ಎಸ್‌ಎಚ್ 57 ಉಷಾ ಸರ್ಸಿಂಗ್ ಹೋಮ್- ಶಿವಮೊಗ್ಗ ನಗರಕ್ಕೆ ಸೇರುವ ರಸ್ತೆ ಮಾರ್ಗವನ್ನು ಬಳಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...