Monday, February 2, 2026
Monday, February 2, 2026

ಕೆರೆಗಳ ಪುನರುಜ್ಜೀವನ & ಸಸಿಗಳ ನೆಡುವಿಕೆ ಮೂಲಕ ಬರಡು ಭೂಮಿಯನ್ನ ಸಮೃದ್ಧ ಅರಣ್ಯವಾಗಿಸಲು ರೋಟರಿ ಸಂಸ್ಥೆಗೆ ಕೈಜೋಡಿಸಿ – ರವಿಶಂಕರ್ ದಾಕೋಜು

Date:

ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಂಡು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೆಂಗಳೂರಿನ ಉದ್ಯಮಿ ಹಾಗೂ ರೋಟರಿ ಜಿಲ್ಲೆ 3192ರ ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಹೇಳಿದರು.

ರೋಟರಿ ಸಂಸ್ಥೆಗೆ 100 ಕೋಟಿ ರೂ. ದಾನ ಮಾಡಿರುವ ಹಿನ್ನೆಲೆಯಲ್ಲಿ ರೋಟರಿ ಸಮೃದ್ಧಿ ಕಾರ್ಯಾಗಾರ, ದತ್ತಿನಿಧಿ ಸಮಾವೇಶದಲ್ಲಿ ಸದಸ್ಯರು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹವಾಮಾನ ವೈಪರೀತ್ಯದಿಂದ ಮಾನವನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ನಮ್ಮ ಮುಂದಿನ ಪೀಳಿಗೆ ಅನುಭವಿಸದಿರಲಿ ಎಂಬ ಸದುದ್ದೇಶದಿಂದ ಕೆರೆಗಳ ಪುನರುಜ್ಜೀವನ ಮತ್ತು ಲಕ್ಷಾಂತರ ಸಸಿಗಳನ್ನು ನೆಡುವುದರ ಮುಖಾಂತರ ಬರಡು ಭೂಮಿಯನ್ನು ಸಮೃದ್ಧ ಕಾಡನ್ನಾಗಿ ಪರಿವರ್ತಿಸಲು ರೋಟರಿ ಸಂಸ್ಥೆ ಜೊತೆಗೆ ಕೈಜೋಡಿಸಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಮುಂದಿನ ಪೀಳಿಗೆ ತಾವು ಮಾಡದ ತಪ್ಪಿಗೆ ಶಿಕ್ಷೆಯನ್ನು ಅನುಭವಿಸಬಾರದು. ಆದ್ದರಿಂದ ಪ್ರತಿಯೊಬ್ಬರು. ಪರಿಸರ ಸಂರಕ್ಷಣೆಯಲ್ಲಿ ಪ್ರಾಮಾಣಿಕವಾಗಿ ಕೈಜೋಡಿಸಬೇಕು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ ಕುಮಾರ್, ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ಸಮಾವೇಶದ ಅಧ್ಯಕ್ಷ ಚಂದ್ರಹಾಸ್ ಪಿ ರಾಯ್ಕರ್, ಮಾಜಿ ಜಿಲ್ಲಾ ಗವರ್ನರ್ ಸಾಂಬಶಿವ ರಾವ್ ಪತಿಬಂದ್ಲ, ಡಾ. ನಾರಾಯಣ್, ಡಾ. ವಿನಯಕುಮಾರ್, ರಾಜಾರಾಮ್ ಭಟ್ ಬಿ, ಡಿ.ಎಸ್.ರವಿ, ಬಿ.ಎನ್.ರಮೇಶ್, ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣಗೌಡ ಬಿ, ವಲಯ 10ರ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಪ್ರಮೋಷನ್ ಚೇರ್ಮನ್ ಜಿ.ವಿಜಯಕುಮಾರ್, ಸಮಾವೇಶದ ಕಾರ್ಯದರ್ಶಿ ಡಾ. ಗುಡದಪ್ಪ ಕಸಬಿ, ಮಾಜಿ ಜಿಲ್ಲಾ ಗವರ್ನರ್ ಬಿ.ಎಂ.ರಮೇಶ್, ರೇಖಾ ಪಾಲಾಕ್ಷ, ಪದ್ಮಿನಿ ವಸಂತ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...