Wednesday, December 17, 2025
Wednesday, December 17, 2025

DVS College of Arts, Science and Commerce ವಿದ್ಯಾರ್ಥಿಗಳು ಸಸ್ಯಶಾಸ್ತ್ರದ ಅರಿವು ಹೊಂದುವುದು ಅವಶ್ಯಕ- ಪ್ರೊ.ಕೆ.ಕೇಶವ್

Date:

DVS College of Arts, Science and Commerce ಸಸ್ಯ ವೈವಿಧ್ಯತೆಯ ಅರಿವು ಮೂಡಿಸುವುದರಿಂದ ಸಸ್ಯಗಳ ರಕ್ಷಣೆ ಹಾಗೂ ಸಂಶೋಧನೆಗೆ ನೆರವಾಗುತ್ತದೆ. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅವಶ್ಯಕ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ. ಕೆ.ಕೇಶವ್ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸಸ್ಯ ವರ್ಗೀಕರಣ, ಸಸ್ಯ ಗುರುತಿಸುವುದು ಹಾಗೂ ಹರ್ಬೇರಿಯಂ ತಯಾರಿಕಾ ತಂತ್ರಗಳು ವಿಷಯ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಸಸ್ಯಗಳ ವರ್ಗೀಕರಣದಿಂದ ಗಿಡಗಳನ್ನು ಸರಿಯಾಗಿ ಗುರುತಿಸಲು ಸಹಕಾರಿಯಾಗುತ್ತದೆ. ವೈಜ್ಞಾನಿಕ ಹೆಸರುಗಳನ್ನು ತಿಳಿದುಕೊಳ್ಳುವುದರಿಂದ ಜಾಗತಿಕವಾಗಿ ಗುರುತಿಸಲು ನೆರವಾಗುತ್ತದೆ. ವಿದ್ಯಾರ್ಥಿಗಳು ಸಸ್ಯಶಾಸ್ತ್ರದ ಬಗ್ಗೆ ಸಂಪೂರ್ಣ ಮಾಹಿತಿ ಹೊಂದುವುದು ಅವಶ್ಯಕ. ಪ್ರಾಯೋಗಿಕ ಜ್ಞಾನ ಹೊಂದುವುದು ಮುಖ್ಯ ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ದಿನನಿತ್ಯ ಪಠ್ಯದ ಜತೆಗೆ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದರಿಂದ ವಿಷಯಗಳ ಜ್ಞಾನ ವಿಸ್ತಾರವಾಗಲು ಅನುಕೂಲವಾಗುತ್ತದೆ. ಡಿವಿಎಸ್ ಸಂಸ್ಥೆಯು ಪಠ್ಯ ಚಟುವಟಿಕೆಗಳ ಜತೆಯಲ್ಲಿ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ವೈವಿಧ್ಯ ಚಟುವಟಿಕೆಗಳನ್ನು ಆಯೋಜಿಸಿ ಮಾರ್ಗದರ್ಶನ ನೀಡುತ್ತಿದೆ ಎಂದು ಹೇಳಿದರು.

ಭಾರತೀಯ ಸಸ್ಯಶಾಸ್ತ್ರ ಸಮೀಕ್ಷೆಯ ಪಶ್ಚಿಮಘಟ್ಟ ಪ್ರಾದೇಶಿಕ ಕೇಂದ್ರದ ರಿಸರ್ಚ್‌ ಅಸೋಸಿಯೇಟ್‌ ಡಾ. ಜಗದೀಶ್ ವಿಷ್ಣು ದಳವಿ ಮತ್ತು ಶೃಂಗೇರಿ ಜೆಸಿಬಿಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಇ.ಎಸ್.ಕುಮಾರಸ್ವಾಮಿ ಉಡುಪ ಅವರು ಕಾರ್ಯಾಗಾರದ ಮಾಹಿತಿ ನೀಡಿದರು.

DVS College of Arts, Science and Commerce ತರಬೇತಿಯಲ್ಲಿ ಸಸ್ಯ ಗುರುತಿಸುವಿಕೆ, ಮಾದರಿ ಸಂಗ್ರಹಣೆ, ಒಣಗಿಸುವಿಕೆ, ಹರ್ಬೇರಿಯಂ ತಯಾರಿಕೆ ಹಾಗೂ ಟ್ಯಾಕ್ಸಾನಾಮಿಕ್ ಕೀ ಬಳಕೆಯ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಲಾಯಿತು.

ದೇಶೀಯ ವಿದ್ಯಾ ಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭಕೋರಿದರು. ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ ಲಮಾಣಿ, ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...