Monday, February 2, 2026
Monday, February 2, 2026

ಮೈಸೂರಿನಲ್ಲಿ ಒಡಿಸ್ಸಿ ನೃತ್ಯೋತ್ಸವ-2025.ನಾಡಿನ ಶ್ರೇಷ್ಠ ನೃತ್ಯ ಕಲಾವಿದರು ಭಾಗಿ- ಪೃಥೆ ಹವಾಲ್ದಾರ್

Date:

ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆÀಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್‌ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್ ಸೆಂಟರ್ ಆರ್ಟ್ ಅಂಡ್ ಕಲ್ಚರ್ (ಜೆಸಿಎಸಿ), ವೇದಿಕೆಯಲ್ಲಿ ಸಂಜೆ 05;30ಕ್ಕೆ ಈ ಮೈಸೂರು ಒಡಿಸ್ಸಿ ಉತ್ಸವವನ್ನು ಆಯೋಜಿಸಲಾಗಿದ್ದು, ಈ ಉತ್ಸವದಲ್ಲಿ ನಾಡಿನ ಹೆಸರಾಂತ ಒಡಿಸ್ಸಿ ನೃತ್ಯ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಮೈಸೂರಿನ ಶ್ರೀ ಕೃಷ್ಣ ಗಾನ ಸಭಾದ ಅಧ್ಯಕ್ಷರಾದ ಶ್ರೀ ಶ್ರೀಧರ ರಾಜ್ ಅರಸ್, ಮೈಸೂರಿನ ಪುರಿ ಜಗನ್ನಾಥ ಸಾಂಸ್ಕೃತಿಕ ಮತ್ತು ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀ ಘನಶ್ಯಾಮ್, ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಬಿ. ಪಿ. ಮೂರ್ತಿ, ಒಡಿಸ್ಸಿ ನೃತ್ಯ ಕಲಾವಿದರು ಹಾಗೂ ಆರಿಯಾಧನಾ -ಫೌಂಡೇಶನ್ ನಿರ್ದೇಶಕರೂ ಆದ ಶ್ರೀಮತಿ ಕೆ. ಜ್ಯೋತಿರ್ಮಯಿ ಪಟ್ನಾಯಕ್, ಮೈಸೂರಿನ ಪ್ರಸಿದ್ಧ ನೃತ್ಯ ಕಲಾವಿದರಾದ ಶ್ರೀ ಬದರಿ ದಿವ್ಯಭೂಷಣ ಪಾಲ್ಗೊಳ್ಳಲಿದ್ದಾರೆ ಎಂದ ಅವರು, ಮೈಸೂರು ಓಡಿಸ್ಸಿ ಉತ್ಸವ 2025 ಅನ್ನು ಪುರಿ ಜಗನ್ನಾಥ್ ಸಾಂಸ್ಕೃತಿಕ ಮತ್ತು ಕಲ್ಯಾಣ ಸಮಾಜದ ಅಧ್ಯಕ್ಷರಾದ ಶ್ರೀ ಘನಶ್ಯಾಮ ಪ್ರಧಾನ್, ಅಸ್ಸಾಂನ ಕಾಜಿರಂಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪ್ರಶಾಂತ ಕುಮಾರ ಮಿಶ್ರ, ಮೈಸೂರಿನ ಮನಸ್ಥಳ ಮೈಂಡ್ – ಲಿವಿಂಗ್ ಹಾಗೂ ರುದ್ರ ನೃತ್ಯ ಯೋಗ ಶಾಲಾ ಪರಿವಾರ ಮತ್ತು ವಿದ್ಯಾರ್ಥಿಗಳೊಂದಿಗೆ ನೃತ್ಯ ಗುರು ಸಿಂಧು ಕಿರಣ್ ಆಯೋಜಿಸಿದ್ದಾರೆ ಎಂದರು.
ಗುರು ಸಿಂಧು ಕಿರಣ್‌ರವರು, ಮೈಸೂರಿನ ಗೋಕುಲಂನಲ್ಲಿ ನೃತ್ಯ ತರಗತಿಗಳನ್ನು ನಡೆಸುತ್ತಿದ್ದು, ಕಳೆದ ಇಪ್ಪತ್ತೊಂಬತ್ತು ವರ್ಷಗಳಿಂದ ನೃತ್ಯ ವಿದ್ಯಾರ್ಥಿಗಳಿಗೆ ಒಡಿಸ್ಸಿ ಪರಂಪರೆಯನ್ನು ಪರಿಚಯಿಸುತ್ತಿದ್ದಾರೆ. ಇವರು ಪದ್ಮಭೂಷಣ ಗುರು ಕೇಳುಚರಣ್ ಮಹಾಪಾತ್ರ, ಶ್ರೀಮತಿ ಪ್ರೋತಿಮಾ ಗೌರಿ ಬೆಡಿ ಮತ್ತು ಗುರು ರತಿಕಾಂತ್ ಮಹಾಪಾತ್ರ ಅವರ ಶಿಷ್ಯೆ. ಸಿಂಧು ಕಿರಣ್‌ರವರು, ನೃತ್ಯ ವಿನ್ಯಾಸಕಿಯಾಗಿ, ಕಲಾವಿದೆಯಾಗಿ, ನೃತ್ಯಗುರುವಾಗಿ, ಸಂಪನ್ಮೂಲ ವ್ಯಕ್ತಿಯಾಗಿ ದೇಶ ವಿದೇಶಗಳ ಪ್ರತಿಷ್ಟಿತ ವೇದಿಕೆಗಳಲ್ಲಿ, ನೃತ್ಯೋತ್ಸವಗಳಲ್ಲಿ ಒಡಿಸ್ಸಿ ನೃತ್ಯ ಪ್ರದರ್ಶಿಸಿ, ಶ್ರೇಷ್ಟ ಪರಂಪರೆ ಪ್ರಬಂಧ ಮಂಡಿಸಿ ಗಮನ ಸೆಳೆದಿದ್ದಾರೆ ಎಂದು ಗುರುವಿನ ಪರಿಚಯ ಮಾಡಿಕೊಟ್ಟ ಅವರು, ಮೈಸೂರಿನಲ್ಲಿ ಒಡಿಸ್ಸಿಯನ್ನು ಪರಿಚಯಿಸುವ ಹಾಗೂ ಆಸಕ್ತ ವಿದ್ಯಾರ್ಥಿಗಳಿಗೆ ಕಲಿಸುವ ದೃಷ್ಟಿಯಿಂದ ರುದ್ರ ನೃತ್ಯ ಯೋಗಶಾಲೆಯನ್ನು ಸ್ಥಾಪಿಸಿ, ಆ ಮೂಲಕ ಮುಂದಿನ ಪೀಳಿಗೆಗೆ ನೃತ್ಯ ಪರಂಪರೆಯನ್ನು ಧಾರೆ ಎರೆಯುತ್ತಿದ್ದಾರೆ. ಮೈಸೂರು ಒಡಿಸ್ಸಿ ಉತ್ಸವ ಮೂಲಕ ಅಪರೂಪದ ಈ ಸಾಂಸ್ಕೃತಿಕ ಪರಂಪರೆಗೆ ಜಾಗತಿಕ ಮನ್ನಣೆ ತರುವ ಪ್ರಯತ್ನದಲ್ಲಿದ್ದಾರೆ. ಜೊತೆಗೆ ಈ ಮೈಸೂರು ಉತ್ಸವದ ಮೂಲಕ ಜಗತ್ತಿನಾದ್ಯಾಂತ ಕಲಾವಿದರು ಮೈಸೂರಿಗೆ ಆಹ್ವಾನಿಸಿ ಅವರಿಂದ ನೃತ್ಯ ಪ್ರದರ್ಶನ ನೀಡಿ, ಆ ನೃತ್ಯ ಪರಂಪರೆಯ ಶ್ರೇಷ್ಟತೆಯನ್ನು ಅನಾವರಣಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಉಚಿತವಾಗಿ ನಡೆಯುವ ಈ ಮೈಸೂರು ಒಡಿಸ್ಸಿ ಉತ್ಸವದಲ್ಲಿ ನೃತ್ಯಾಸಕ್ತರು, ನೃತ್ಯ ರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ನೃತ್ಯಗುರು ಸಿಂಧು ಕಿರಣ್, ರುದ್ರನೃತ್ಯ ಯೋಗ ಶಾಲೆಯ ಹಿತೈಷಿ, ಪತ್ರಕರ್ತ ವೈದ್ಯನಾಥ್ ಹೆಚ್. ಯು, ಪ್ರ‍್ಸಾನ್ಸ್ನ ನೃತ್ಯ ಕಲಾವಿದೆ ಹಾಗೂ ಗುರು ಸಿಂಧು ಕಿರಣ್‌ರವರ ಶಿಷ್ಯೆ ಅವಿನಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...