Friday, March 20, 2026
Friday, March 20, 2026

Indian Medical Association ಸಂಬಂಧಗಳ ನಿರ್ವಹಣೆ ಮಾಡಿ.ಮೊಬೈಲ್- ಇಂಟರ್ನೆಟ್ ಗಳಿಂದ ದೂರವಿರಿ- ಮನೋವೈದ್ಯ ಡಾ.ಎಸ್.ಟಿ.ಅರವಿಂದ್.

Date:

Indian Medical Association ಜೀವನದಲ್ಲಿ ಗುರಿ ಸಾಧಿಸಲು ನಿರಂತರ ಪರಿಶ್ರಮ ವಹಿಸುವುದು ಅತ್ಯಂತ ಅವಶ್ಯಕ ಎಂದು ಮನೋವೈದ್ಯ ಡಾ. ಎಸ್.ಟಿ.ಅರವಿಂದ ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆ ರಾಜ್ಯಾಧ್ಯಕ್ಷ ಡಾ. ವೀರಭದ್ರಯ್ಯ.ಟಿ.ಎ ಅವರ ಮುಂದಾಳತ್ವದಲ್ಲಿ ಶಿವಮೊಗ್ಗ ಘಟಕದಿಂದ ಗಾಡಿಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ “ಐಎಂಎ ನಡಿಗೆ, ಶಾಲೆಯ ಕಡೆಗೆ” ಕಾರ್ಯಕ್ರಮದಲ್ಲಿ ಹದಿಹರೆಯದ ವಯಸ್ಸಿನ ಮಾನಸಿಕ ತುಮುಲಗಳ ಬಗ್ಗೆ ಮಾತನಾಡಿದರು.

ವೃತ್ತಿಕ್ಷೇತ್ರದಲ್ಲಿ ಮುನ್ನಡೆಯುವಾಗ ಅನೇಕ ರೀತಿ ಸಮಯ ವ್ಯರ್ಥ ಆಗುವ ಆಕರ್ಷಣೆಗಳಿಗೆ ಒಳಗಾಗುತ್ತೇವೆ. ಚಂಚಲ ಮನಸ್ಥಿತಿ ಎದುರಿಸಬೇಕಾಗುತ್ತದೆ. ಸಮಯ ವ್ಯರ್ಥವಾಗುವ ಆಕರ್ಷಣೆಗಳಿಂದ ದೂರ ಇರಬೇಕು. ಕೋಪ ನಿಯಂತ್ರಣ ಸಾಧಿಸಬೇಕು. ಸಂಬಂಧಗಳ ನಿರ್ವಹಣೆ ಸರಿಯಾಗಿರಬೇಕು. ಮೊಬೈಲ್, ಇಂಟರ್‌ನೆಟ್ ಗೀಳಿನಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಐಎಂಎ ಶಿವಮೊಗ್ಗ ಕಾರ್ಯದರ್ಶಿ, ಮನೋವೈದ್ಯೆ ಡಾ. ಕೆ ಎಸ್ ಶುಭ್ರತಾ ಅವರು ಹದಿಹರೆಯದ ಮಾನಸಿಕ ಆರೋಗ್ಯದ ಕುರಿತು ಮಾತನಾಡಿ, ಹದಿಹರೆಯದ ವಯಸ್ಸಿನಲ್ಲಿ ಎದುರಿಸುವಂತಹ ಭಾವನಾತ್ಮಕ ಬದಲಾವಣೆಗಳು, ತನ್ನತನದ ಹುಡುಕಾಟ, ಸಮಾಜದ ಒತ್ತಡಗಳನ್ನ ಎದುರಿಸುವುದು, ಇವೆಲ್ಲದರ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಬೇಕು ಎಂದು ತಿಳಿಸಿದರು.

ಐಎಂಎ ಶಿವಮೊಗ್ಗ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಮಾತನಾಡಿ, ಐಎಂಎ ನಡಿಗೆ, ಶಾಲೆಯ ಕಡೆಗೆ ಘೋಷವಾಕ್ಯದೊಂದಿಗೆ ವಿವಿಧ ಶಾಲೆಗಳಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇದರ ಭಾಗವಾಗಿ ಐಎಂಎ ಶಿವಮೊಗ್ಗ ಈಗಾಗಲೇ ಎರಡು ಸರ್ಕಾರಿ ಶಾಲೆಗಳಲ್ಲಿ ಆರೋಗ್ಯದ ಅರಿವು ಕಾರ್ಯಕ್ರಮ ನಡೆಸಿದೆ ಎಂದು ತಿಳಿಸಿದರು.

Indian Medical Association ಶಿವಮೊಗ್ಗ ನಗರದ ಯಾವುದೇ ಸರ್ಕಾರಿ ಶಾಲೆ ಅಥವಾ ಖಾಸಗಿ ಶಾಲೆಗಳಿಗೆ ನುರಿತ ವೈದ್ಯರಿಂದ ಅರಿವಿನ ಕಾರ್ಯಕ್ರಮಗಳ ಅಗತ್ಯ ಇದ್ದರೆ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಸದಾ ಸಿದ್ಧವಿದೆ ಎಂದರು.

ಗಾಡಿಕೊಪ್ಪದ ಸರ್ಕಾರಿ ಪ್ರೌಢಶಾಲೆ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಮತ್ತು ಇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಬಿಳಕಿಯ ಬಸಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್ ಮತ್ತು ಇತರ ಉಪಾಧ್ಯಾಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...