Thursday, March 19, 2026
Thursday, March 19, 2026

IMA KARNATAKA ಸ್ಟೆಥಾಸ್ಕೋಪ್ ಹಿಡಿದ‌ ಕೈ ,ಕವನ ಬರೆದಾಗ…

Date:

IMA KARNATAKA ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಕನ್ನಡ ಪುಸ್ತಕಗಳನ್ನು ರದ್ದಿಗೆ ಕೊಡದಂತೆ ಆಗದಿರಲಿ. ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಕವಿಗೋಷ್ಠಿಯಲ್ಲಿ ಮಾತನಾಡಿ, ವೈದ್ಯರಾದವರು ಕವನ ರಚನೆಯಲ್ಲಿ ಇಷ್ಟು ತೊಡಗಿಸಿಕೊಂಡಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಪದ್ಯ, ಕವಿತೆ ರಚನೆಗೆ ಇಂತಹ ವೃತ್ತಿ ಎಂಬುದಿಲ್ಲ. ಸೂಕ್ಷ್ಮ ಮನಸ್ಸಿನವರು ಇರುವವರೆಗೂ ಕಾವ್ಯಗಳು ಹುಟ್ಟುತ್ತದೆ. ಕಾವ್ಯಗಳು ರಚನೆಯಾಗುವವರೆಗೂ ಬದುಕಿನಲ್ಲಿ ಮತ್ತು ವಿಶ್ವದಲ್ಲಿ ಶಾಂತಿ ನೆಲೆಸಿರುತ್ತದೆ. ಕವಿತೆಗಳಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವವನು ಓದುಗ. ಓದುಗನ ಹೃದಯಕ್ಕೆ ಕವಿತೆ ಸ್ಪಂದಿಸಿತೆಂದರೆ ಅದಕ್ಕೆ ಜೀವ ಬಂದಂತೆ ಎಂದರು.

ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಅವರು ಕಾವ್ಯರಚನೆಯ ಬಗ್ಗೆ, ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡಿದರು. ಡಾ. ಚಿತ್ರ ಶ್ರೀನಿವಾಸ್ ಪ್ರಾರ್ಥನೆ ನಡೆಸಿದರು. ಡಾ. ವಿನಯ ಶ್ರೀನಿವಾಸ ಅವರು ಕಾರ್ಯಕ್ರಮ ನಿರ್ವಹಿಸಿದರು.

IMA KARNATAKA ಡಾ. ಗುರುದತ್ತ.ಕೆ.ಎನ್., ಡಾ. ವೈ.ಜೆ.ಅನುಪಮ, ಡಾ. ಡೋ.ನ.ವೆಂಕಟೇಶ್, ಡಾ. ವಿಜಯಲಕ್ಷ್ಮೀ ರವೀಶ್, ಡಾ. ಕೌಸ್ತುಭ ಅರುಣ್, ಡಾ. ಭಾರತಿ.ಎಚ್.ಜಿ., ಡಾ. ಅರವಿಂದನ್, ಡಾ. ಶಾಂತಲಾ ಮತ್ತು ಡಾ. ಚಂದ್ರಕಾಂತ್.ಎಸ್.ಎಸ್ ಸ್ವರಚಿತ ಕವಿತೆಗಳನ್ನು ಓದಿದರು.

ಐಎಂಎ ಶಿವಮೊಗ್ಗದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಮಹಿಳಾ ಘಟಕದ ಅಧ್ಯಕ್ಷೆ ಡಾ. ಕೌಸ್ತುಭಾ ಅರುಣ್ ಮತ್ತು ಇತರ ವೈದ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...