Tuesday, May 5, 2026
Tuesday, May 5, 2026

ಕನ್ನಡನಾಡಿನ ಕಂಪು ಎಲ್ಲೆಡೆ ಪಸರಿಸಲಿ- ಶ್ರೀನಾದಮಯಾನಂದನಾಥಶ್ರೀ

Date:

ಕನ್ನಡ ನಾಡಿನ ಕಂಪು ಎಲ್ಲೆಡೆ ಪಸರಿಸಲಿ ಎಂದು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಅಭಿಪ್ರಾಯಪಟ್ಟರು.
ಅವರು ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶರಾವತಿ ನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ನಾಡಗೀತೆಗೆ ನೂರರ ಸಂಭ್ರಮ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯವಹಿಸಿ ಮಾತನಾಡಿದರು.
ಕನ್ನಡ ನಾಡಿನ ಪರಂಪರೆಯ ಹೆಮ್ಮೆಯನ್ನು ಪ್ರತಿಬಿಂಬಿಸುವ ಕುವೆಂಪು ರಚಿಸಿದ ನಾಡಗೀತೆಗೆ ೧೦೦ ವರ್ಷ ತುಂಬಿದ ಸುಸಂದರ್ಭದಲ್ಲಿ ನೂರು ವಿದ್ಯಾರ್ಥಿಗಳ ನೂರು ಕಂಠಗಳ ಸಿರಿಯಿಂದ ಒಕ್ಕೂರಲ ಗಾಯನ ಮಾಡಲಾಯಿತು.
ಕನ್ನಡ ನಾಡು-ನುಡಿಗೆ ಅಪಾರ ಕೊಡುಗೆಯನ್ನು ನೀಡಿದ ಮಹಾನ್ ಕವಿಗಳ, ಜ್ಞಾನಪೀಠ ಪ್ರಶಸ್ತಿ ವಿಜೇತರ ವೇಷವನ್ನು ಧರಿಸಿದ ಮಕ್ಕಳೊಂದಿಗೆ ಜಾಥಾ ನಡೆಸಲಾಯಿತು .
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಕು. ದಿವ್ಯ ಕರಣಂ, ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...