Friday, December 5, 2025
Friday, December 5, 2025

Karnataka Chamber of Commerce and Industry ಹಿರಿಯ ಮಹಿಳಾ ಉದ್ಯಮಿ ಡಾ.ಲಕ್ಷ್ಮೀಗೋಪಿನಾಥ್ ಮತ್ತು ಮಧುಮಿತಾ ಅವರಿಗೆ ಅಭಿನಂದನೆ

Date:

Karnataka Chamber of Commerce and Industry ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಇತರ ರಾಜ್ಯಗಳಿಂದ ಬಂದ ಮಹಿಳಾ ಉದ್ಯಮಿಗಳು ಉಪಸ್ಥಿತರಿದ್ದ ಕಾರ್ಯಕ್ರಮಕದಲ್ಲಿ ಸಾಧಕ ಮಹಿಳಾ ಉದ್ಯಮಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ನಿರ್ದೇಶಕರಾದ ಡಾ.ಲಕ್ಷ್ಮೀದೇವಿ ಗೋಪಿನಾಥ್ ರವರು ಅಸಾಮಾನ್ಯ ಸಾಧನೆ ಮತ್ತು ನಾಯುಕತ್ವ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಅಲ್ಲದೆ ಸಂಸ್ಥೆಯ ಮತ್ತೋರ್ವ ನಿರ್ದೇಶಕರಾದ ಎಸ್ ಎಸ್ ಉದಯ ಕುಮಾರ್ ರವರ ಪುತ್ರಿಯಾದ ಸಂಘದ ಸದಸ್ಯರಾದ ಶ್ರೀಮತಿ ಮಧುಮಿತರವರಿಗೆ ಉದಯೋನ್ಮಕ ಯುವ ಉದ್ಯಮಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಇವರಿಬ್ಬರನ್ನು ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕೆ ಸಂಘವ ಅಧ್ಯಕ್ಷರಾದ ಬಿ ಗೋಪಿನಾಥ್ ರವರು ಹುತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಿ ಗೋಪಿನಾಥ್ ರವರು ತಮ್ಮ ಹೇಳಿಕೆಯಲ್ಲಿ ಸನ್ಮಾನಿತ ಡಾ.ಲಕ್ಷ್ಮೀದೇವಿ ಗೋಪಿನಾಥ್ರವರಿಗೆ ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ಮಹಿಳಾ ಉದ್ಯಮಿ ಪ್ರಶಸ್ತಿಯು ಸಹ ದೊರಕಿದೆ.

Karnataka Chamber of Commerce and Industry ಶ್ರೀಮತಿ ಮಧುಮಿತ ರವರು ಹೋಟೆಲ್ ಉದ್ಯಮದಲ್ಲಿ ಅಪಾರ ಯಶಸ್ಸುಗಳಿಸಿದ್ದಾರೆ ಇವರಿಬ್ಬರ ಈ ಸಾಧನೆ ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಕಾರ್ಯ ಸಂಘಕ್ಕೆ ಹೆಮ್ಮೆ ತಂದಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ ವಿಜಯ್ ಕುಮಾರ್, ಕಾರ್ಯದರ್ಶಿ ಎ ಎಂ ಸುರೇಶ್ ಮತ್ತು ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು ಪ್ರಶಸ್ತಿ ಪುರಸ್ಕೃತ ಮಹಿಳಾ ಉದ್ಯಮಿಗಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...