Monday, February 2, 2026
Monday, February 2, 2026

Akashavani Bhadravati ನಮ್ಮ ತಾಯ್ನುಡಿಯನ್ನ ಗೌರವಿಸಬೇಕು- ಡಾ.ಡಿ.ಆರ್. ಭಾರತೀದೇವಿ

Date:

Akashavani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರು ಮತ್ತು ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ಸದಸ್ಯರಾದ ಡಾ. ಭಾರತಿದೇವಿ ಡಿ.ಆರ್ ಅವರು ಅನ್ನಕೊಡುವ ಭಾಷೆಯೆಂದು ಬೇರೆ ಭಾಷೆಯನ್ನು ಓಲೈಸದೆ ನಮ್ಮ ತಾಯ್ನುಡಿಯನ್ನ ಗೌರವಿಸಬೇಕು ಹಾಗು ಕರ್ನಾಟಕvದವರೆಲ್ಲರೂ ಒಗ್ಗೂಡಿ ನಾವು ಕನ್ನಡಿಗರೂ ಎನ್ನುವ ಭಾವನೆ ಬೆಳೆಸಿಕೊಳ್ಳಲು ತಿಳಿಸಿದರು.

ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಅವರು ಕನ್ನಡ ನಾಡು ನುಡಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ, ಜ್ಞಾನಪೀಠ ಮತ್ತು ಮುಖ್ಯಮಂತ್ರಿಗಳನ್ನ ನೀಡಿ ಕನ್ನಡದ ಹೋರಾಟದಲ್ಲಿಯೂ ಅತ್ಯಂತ ಪ್ರಮುಖ ಪಾತ್ರವಹಿಸಿದ್ದು ಅದನ್ನ ಉಳಿಸಿ ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಕೃಷ್ಣಪ್ಪ ರವರು ಹಳ್ಳಿಯಲ್ಲಿ ಹುಟ್ಟಿದರೂ ಇಂಗ್ಲೀಷಿನ ವ್ಯಾಮೋಹವನ್ನ ಬೆಳೆಸಿಕೊಂಡು ಹೋಗುತ್ತಿರುವಾಗ ನಮ್ಮಲ್ಲಿರುವ ಕನ್ನಡದ ಕೀಳಿರೆಮೆಯನ್ನ ಬಿಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಕಾಶವಾಣಿಯ ಕಾರ್ಯಕ್ರಮ, ತಾಂತ್ರಿಕ, ಆಡಳಿತ, ಉದ್ಘೋಷಕವರ್ಗ ಹಾಗು ನಿರ್ಮಾಣ ತಂಡದ ಎಲ್ಲಾ ಸಿಬ್ಬಂದಿಗಳಿಗೆ ಮಡಿಕೆ ಒಡೆಯುವ ಸ್ಪರ್ಧೆ ಮತ್ತು ಮ್ಯೂಸಿಕಲ್ ಚೇರ್ ಹಾಗು ಅಂತ್ಯಾಕ್ಷರಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

Akashavani Bhadravati ಎಸ್.ಎಂ.ಸುಧಾಕರ್ ಅವರು ಸ್ವಾಗತಿಸಿ, ಕೇಶವಮೂರ್ತಿಯವರು ವಂದನಾರ್ಪಣೆಯನ್ನು ಸಲ್ಲಿಸಿದರು. ಅರ್ಪಿತಾ ನಾಯುರ್ ನಿರೂಪಣೆ ಮಾಡಿದರು. ಐವತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಅದ್ದೂರಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...