Friday, March 20, 2026
Friday, March 20, 2026

Akashavani Bhadravati ನಮ್ಮ ತಾಯ್ನುಡಿಯನ್ನ ಗೌರವಿಸಬೇಕು- ಡಾ.ಡಿ.ಆರ್. ಭಾರತೀದೇವಿ

Date:

Akashavani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರು ಮತ್ತು ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ಸದಸ್ಯರಾದ ಡಾ. ಭಾರತಿದೇವಿ ಡಿ.ಆರ್ ಅವರು ಅನ್ನಕೊಡುವ ಭಾಷೆಯೆಂದು ಬೇರೆ ಭಾಷೆಯನ್ನು ಓಲೈಸದೆ ನಮ್ಮ ತಾಯ್ನುಡಿಯನ್ನ ಗೌರವಿಸಬೇಕು ಹಾಗು ಕರ್ನಾಟಕvದವರೆಲ್ಲರೂ ಒಗ್ಗೂಡಿ ನಾವು ಕನ್ನಡಿಗರೂ ಎನ್ನುವ ಭಾವನೆ ಬೆಳೆಸಿಕೊಳ್ಳಲು ತಿಳಿಸಿದರು.

ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಅವರು ಕನ್ನಡ ನಾಡು ನುಡಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ, ಜ್ಞಾನಪೀಠ ಮತ್ತು ಮುಖ್ಯಮಂತ್ರಿಗಳನ್ನ ನೀಡಿ ಕನ್ನಡದ ಹೋರಾಟದಲ್ಲಿಯೂ ಅತ್ಯಂತ ಪ್ರಮುಖ ಪಾತ್ರವಹಿಸಿದ್ದು ಅದನ್ನ ಉಳಿಸಿ ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಕೃಷ್ಣಪ್ಪ ರವರು ಹಳ್ಳಿಯಲ್ಲಿ ಹುಟ್ಟಿದರೂ ಇಂಗ್ಲೀಷಿನ ವ್ಯಾಮೋಹವನ್ನ ಬೆಳೆಸಿಕೊಂಡು ಹೋಗುತ್ತಿರುವಾಗ ನಮ್ಮಲ್ಲಿರುವ ಕನ್ನಡದ ಕೀಳಿರೆಮೆಯನ್ನ ಬಿಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಕಾಶವಾಣಿಯ ಕಾರ್ಯಕ್ರಮ, ತಾಂತ್ರಿಕ, ಆಡಳಿತ, ಉದ್ಘೋಷಕವರ್ಗ ಹಾಗು ನಿರ್ಮಾಣ ತಂಡದ ಎಲ್ಲಾ ಸಿಬ್ಬಂದಿಗಳಿಗೆ ಮಡಿಕೆ ಒಡೆಯುವ ಸ್ಪರ್ಧೆ ಮತ್ತು ಮ್ಯೂಸಿಕಲ್ ಚೇರ್ ಹಾಗು ಅಂತ್ಯಾಕ್ಷರಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

Akashavani Bhadravati ಎಸ್.ಎಂ.ಸುಧಾಕರ್ ಅವರು ಸ್ವಾಗತಿಸಿ, ಕೇಶವಮೂರ್ತಿಯವರು ವಂದನಾರ್ಪಣೆಯನ್ನು ಸಲ್ಲಿಸಿದರು. ಅರ್ಪಿತಾ ನಾಯುರ್ ನಿರೂಪಣೆ ಮಾಡಿದರು. ಐವತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಅದ್ದೂರಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...