Monday, August 10, 2026
Monday, August 10, 2026

Agricultural irrigation project ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಪಡೆಯಲು ಅರ್ಜಿ ಆಹ್ವಾನ

Date:

Agricultural irrigation project ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆಯಿಂದ 2025-26 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶಿಕಾರಿಪುರ ತಾಲೂಕಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಶೇ. 90 ಸಹಾಯಧನ ಲಭ್ಯವಿರುತ್ತದೆ. ಈಗಾಗಲೇ ಮಳೆಗಾಲ ಮುಕ್ತಾಯವಾಗಿದ್ದು, ಮುಂದಿನ ದಿನಗಳಲ್ಲಿ ಬೇಸಿಗೆ ಹಂಗಾಮು ಪ್ರಾರಂಭವಾಗಲಿರುವುದರಿಂದ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

2018-19 ನೇ ಸಾಲಿನ ಹಿಂದೆ ಹನಿ ನೀರಾವರಿ ಘಟಕ ಅಳವಡಿಸಿಕೊಂಡವರು ಘಟಕ ಹಾಳಾಗಿದ್ದರೆ ಪುನಃ ಹೊಸದಾಗಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಇಚ್ಛಿಸುವ ಎಲ್ಲಾ ವರ್ಗದ ರೈತರಿಗೂ ಪುನಃ ಶೇ. 90 ರ ಸಹಾಯಧನ ನೀಡಲು ಅವಕಾಶವಿರುವುದರಿಂದ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Agricultural irrigation project ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಅಂಜನಾಪುರ-8861994178, ತಾಳಗುಂದ – 7975515575, ಕಸಬಾ-9113812090, ಉಡುಗಣಿ – 9108548454, ಹೊಸೂರು – 6363095898 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...