Friday, March 20, 2026
Friday, March 20, 2026

CM Siddharamaiah ಸಿದ್ಧರಾಮಯ್ಯ ಸೀಎಂ ಪೀಠದಲ್ಲೇ ಮುಂದುವರೆಯಲೆಂದು ಅಭಿಮಾನಿಗಳ ಕಾಯಿಸೇವೆ

Date:

CM Siddharamaiah ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು ಎಲ್ಲ ವರ್ಗದ ನಾಯಕ, ಸಾಮಾಜಿಕ ನ್ಯಾಯದ ಹರಿಕಾರ, ಭಾಗ್ಯ ವಿಧಾತ, ಗ್ಯಾರೆಂಟಿಗಳ ಸರದಾರ ಸನ್ಮಾನ್ಯ ಸಿದ್ದರಾಮಯ್ಯನವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಸಲು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಆಗ್ರಹಿಸಿ ಹಾಗೂ ಸಿದ್ದರಾಮಯ್ಯನವರಿಗೆ ರಾಜ್ಯದ ಜನರ ಸೇವೆ ಮಾಡಲು ಇನ್ನು ಹೆಚ್ಚಿನ ಶಕ್ತಿಯನ್ನು ನೀಡಲೆಂದು ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಆಂಜನೇಯ ದೇವಾಲಯದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕುರುಬರ ಸಂಘ ಹಾಗೂ ಶೋಷಿತ ವರ್ಗಗಳ ಯುವ ಒಕ್ಕೂಟ ವಿಶೇಷ ಪೂಜೆ ಸಲ್ಲಿಸಿ ಸಿದ್ದರಾಮಯ್ಯನವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಈಡುಗಾಯಿ ಸಮರ್ಪಣೆ ಮಾಡಲಾಯಿತು.

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಬ್ಬ ಬಡವರ ಪರ, ಮಹಿಳೆಯರ ಪರ, ದೀನ ದಲಿತರ ಪರ ನೊಂದವರ ಪರ ದಕ್ಷ ಆಡಳಿತಗಾರರಾಗಿದ್ದು. ಎರಡು ಬಾರಿ ಈ ರಾಜ್ಯದ ಮುಖ್ಯಮಂತ್ರಿ ಗಳಾಗಿ ತಾವು ಘೋಷಿಸಿದಂತಹ ಭಾಗ್ಯದ ಕಾರ್ಯಕ್ರಮಗಳನ್ನು ಹಾಗೂ ಐತಿಹಾಸಿಕ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ ರಾಜ್ಯದ ಕಟ್ಟ ಕಡೆಯ ವ್ಯಕ್ತಿಯವರೆಗೂ ತಲುಪಿಸುವಂತೆ ನುಡಿದಂತೆ ನಡೆದ ನಾಯಕರಾಗಿ ಭಾರತ ದೇಶವಲ್ಲದೆ ವಿದೇಶಗಳಲ್ಲೂ ಪ್ರಶಂಸೆಯನ್ನು ಹೊಂದಿರುವಂತಹ ಸರ್ಕಾರವನ್ನು ನಡೆಸುತ್ತಿದ್ದು.

ಕೆಲವು ಕಾಣದ ಶಕ್ತಿಗಳು ಕೆಲವು ದಿನಗಳಿಂದ ಕಾಂಗ್ರೆಸ್ ಹೈಕಮಾಂಡ್ ಸಾರ್ವಜನಿಕವಾಗಿ ಅಧಿಕಾರ ಹಂಚಿಕೆ ವಿಚಾರವನ್ನು ಹೇಳದೇ ಇದ್ದರೂ ಗೊಂದಲ ಸೃಷ್ಟಿ ಮಾಡಿ ಸಿದ್ದರಾಮಯ್ಯನವರನ್ನು ವಚನಭ್ರಷ್ಟರು ಎಂದು ಹೇಳುತ್ತಿರುವುದು ಬಾಲಿಶತನದ ಹೇಳಿಕೆ ರಾಜ್ಯದ ಅಹಿಂದ ವರ್ಗದ 70 %ರಿಂದ 80% ಜನರು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೂಡಲೇ ಈ ಗೊಂದಲಗಳಿಗೆ ತೆರೆ ಹೇಳಿದ್ದು. ಸಿದ್ದರಾಮಯ್ಯನವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರಿಸಬೇಕೆಂದು ಈ ಮೂಲಕ ಅಗ್ರಹಿಸುತೇವೆ ಎಂದಿದ್ದಾರೆ.

CM Siddharamaiah ಈ ಸಂದರ್ಭದಲ್ಲಿ ಕುರುಬರ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್, ಸಂಘಟನಾ ಕಾರ್ಯದರ್ಶಿ ಕೆ.ಎಲ್. ಪವನ್, ಎಸ್ ಪಿ ಕೇಶವ, ಆಂಜನೇಯ, ಕೆ .ಆರ್. ಸುರೇಶ್ , ರಾಹುಲ್ ಸಿಗೆಹಟ್ಟಿ, ಶೋಷಿತ ವರ್ಗದ ಯುವ ಘಟಕದ ಸಂಚಾಲಕರಾದ ಮೋಹನ್ ಸೋಮಿನಕೊಪ್ಪ, ರಾಜೇಶ್ ಮಂದಾರ, ವೆಂಕಟೇಶ್ ಕಲ್ಲೂರು, ಪ್ರಮುಖರಾದ ಕೆ ಪಿ ದಿನೇಶ್ ಶರಾವತಿ ನಗರ, ಎಸ್ .ಜಿ ಕಿರಣ್, ಚಂದ್ರು ಗೆಡ್ಡೆ, ಮಂಜುನಾಥ್ ಉಪ್ಪಾರ್, ಮಲ್ಲಿಕಾರ್ಜುನ , ಮಂಜು ಸಿಹಗೆಟ್ಟಿ, ಆರ್‌ ಎಂ ಓಂ, ಬಾಬು, ಚಂದ್ರು, ಶಬರೀಶ್ ಆರ್ಯ, ಸಂಜಯ್, ಸುಹಾಸ್, ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...