Seeta Ramanjaneya Swamy Temple ಶಿವಮೊಗ್ಗ ನಗರದ ಐತಿಹಾಸಿಕ ದೂರ್ವಾಸ ಕ್ಷೇತ್ರ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ದೇವಸ್ಥಾನದ ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ವಿಶೇಷ ಸಮಾಲೋಚನೆ ನಡೆಸಿದರು.
ದೇವಾಲಯದ ಸೌಂದರ್ಯೀಕರಣ, ಮೂಲಭೂತ ಸೌಕರ್ಯಗಳ ಸುಧಾರಣೆ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹತ್ವದ ಯೋಜನೆಗಳನ್ನು ಚರ್ಚಿಸಿದರು.
Seeta Ramanjaneya Swamy Temple ಭೇಟಿಯ ಸಂದರ್ಭ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್, ಪ್ರಮುಖರಾದ ಪ್ರಭಾಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಲಚಂದ್ರ, ಅರ್ಚಕರಾದ ಶ್ರೀರಾಮ್ ಪ್ರಸಾದ್ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
