Tuesday, February 3, 2026
Tuesday, February 3, 2026

ಶಿವಮೊಗ್ಗದಲ್ಲಿ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮ ಯಶಸ್ವಿ

Date:

ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 200 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ಧ್ಯೇಯದೊಂದಿಗೆ ಅನವರತ ಫೌಂಡೇಶನ್ ಹಮ್ಮಿಕೊಂಡಿದ್ದ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮವು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಶಿಕ್ಷಣದ ಮೂಲಕ ಸಾಮಾಜಿಕ ಪ್ರಗತಿಗೆ ನಿರಂತರ ಬೆಂಬಲ ನೀಡುವ ಗುರಿಯನ್ನು ಈಡೇರಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ, ಸಮಾಜದ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಒಟ್ಟು 200 ವಿದ್ಯಾರ್ಥಿಗಳಿಗೆ ವಿದ್ಯಾನಿಧಿಯನ್ನು ವಿತರಿಸಲಾಯಿತು.

ಈ ಮೂಲಕ ಅವರ ಶೈಕ್ಷಣಿಕ ಕನಸುಗಳಿಗೆ ಸಂಸ್ಥೆಯು ಭದ್ರ ಬುನಾದಿ ಒದಗಿಸಿತು.

ಅನವರತ ಫೌಂಡೇಶನ್‌ನ ಈ ಮೊದಲ ಹೆಜ್ಜೆ, ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸುವ ದಿಸೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ.

ಎಸ್ ಎನ್ ಚನ್ನಬಸಪ್ಪ (ಚೆನ್ನಿ)ನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಬಿ ವಿ ವಸಂತ್ ಕುಮಾರ್ , ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಎಸ್ ಎನ್ ನಾಗರಾಜ್ , ಶ್ರೀ ಡಿಎಸ್ ಅರುಣ್ , ವಿಧಾನಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ , ವಿಧಾನಪರಿಷತ್ ಶಾಸಕರಾದ ಶ್ರೀ ಎ.ಜೆ ರಾಮಚಂದ್ರ , ವಿಕಾಸ ವಿದ್ಯಾ ಸಮಿತಿಯ ಕಾರ್ಯದರ್ಶಿಗಳಾದ
ಶ್ರೀ ಎಸ್ ರಾಜಶೇಖರ್ , ದೇಶಿಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಸಮಾರಂಭದಲ್ಲಿ ಮಾತನಾಡಿದ ಗಣ್ಯರು, ಅನವರತ ಫೌಂಡೇಶನ್‌ನ ಈ ಸಾಮಾಜಿಕ ಕಳಕಳಿಯ ಕಾರ್ಯವನ್ನು ಶ್ಲಾಘಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಮಹತ್ವದ ಕುರಿತು ಪ್ರೇರಣಾತ್ಮಕ ಮಾತುಗಳನ್ನಾಡಿದರು.

ಮುಂದಿನ ದಿನಗಳಲ್ಲಿ “ವಿವೇಕ ವಿದ್ಯಾನಿಧಿ” ಕಾರ್ಯಕ್ರಮವನ್ನು ವಿಸ್ತರಿಸುವ ಮೂಲಕ ಇನ್ನಷ್ಟು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮಹತ್ವಾಕಾಂಕ್ಷೆಯನ್ನು ಅನವರತ ಫೌಂಡೇಶನ್ ವ್ಯಕ್ತಪಡಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...