Monday, May 4, 2026
Monday, May 4, 2026

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

Date:

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2389 ರಂತೆ ಖರೀದಿಸಲಾಗುವುದು. ಈ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಯಮಿತ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಸಿಎಂಎಸ್/ಪಿಎಸಿಎಸ್/ಎಫ್‌ಪಿಓ/ಎಸ್‌ಜಿಎಸ್ ಗಳನ್ನು ಸಂಗ್ರಹಣಾ ಏಜೆನ್ಸಿಗಳನ್ನಾಗಿ ನೇಮಿಸಲಾಗಿದೆ.

ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ಗಳಲ್ಲಿರುವ ಕೆಎಫ್‌ಸಿಎಸ್‌ಸಿ ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ರೈತರಿಂದ ಭತ್ತ ಖರೀದಿಸಲಾಗುವುದು.

DC Shivamogga ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರ‍್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ದಿ:31-12-2025 ರವರೆಗೆ ಭತ್ತವನ್ನು ನೊಂದಾಯಿಸಿಕೊಳ್ಳಬಹುದು. ಹಾಗೂ ದಿ:28-02-2026 ರ ಅವಧಿಯವರೆಗೆ ರೈತರಿಂದ ಭತ್ತವನ್ನು ಖರೀದಿ ಮಾಡಲಾಗುವುದು. ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...