Monday, December 8, 2025
Monday, December 8, 2025

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Date:

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ಸೀಮಾ ಸದಾನಂದ್ ಹೇಳಿದರು.

ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿಯಿಂದ ಆಯೋಜಿಸಿದ್ದ “ಜೀವ ಸುರಕ್ಷತೆ” ತಿಳುವಳಿಕೆ ಕಾರ್ಯಕ್ರಮದ ಪ್ರಾತ್ಯಕ್ಷಿಕೆಯಲ್ಲಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬುದನ್ನು ಅರಿತುಕೊಳ್ಳಬೇಕು. ಹೃದಯ ಸಂಬಂಧಿತ ಕಾಯಿಲೆ ಎದುರಾದಾಗ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬರೂ ಆರೋಗ್ಯದ ಅರಿವು ಹೊಂದಬೇಕು ಎಂದು ತಿಳಿಸಿದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಸಂಪನ್ಮೂಲ ವ್ಯಕ್ತಿ ಡಾ. ಶ್ವೇತಾ ಬಾದಾಮಿ ಅವರು ಹೃದಯ ಸ್ತಂಭನವಾದಾಗ ಹೇಗೆ ಜೀವ ರಕ್ಷಿಸಬಹುದು ಎಂಬ ವಿಷಯವನ್ನು ಸವಿಸ್ತಾರವಾಗಿ ತಿಳಿಸಿದರು.

Shimoga News ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಕಾರ್ಯದರ್ಶಿ ವಾಣಿ ಪ್ರವೀಣ್ ಮಾತನಾಡಿ, ಸಿಪಿಆರ್ ಅರಿವು ಕಾರ್ಯಕ್ರಮಗಳಿಂದ ಜನರಲ್ಲಿ ಆರೋಗ್ಯ ಜಾಗೃತಿ ಮೂಡುತ್ತದೆ. ಸಿಪಿಆರ್ ಪ್ರಕ್ರಿಯೆ ಕಲಿಯುವುದರಿಂದ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಉಪಾಧ್ಯಕ್ಷೆ ಪ್ರೇಮಾ ರಮೇಶ್, ಅರ್ಚನಾ ಅಣ್ಣಪ್ಪ, ಸಹ ಕಾರ್ಯದರ್ಶಿ ಸುಧಾ ಸುರೇಶ್, ಚೇತನಾ ವಾದಿರಾಜ್, ಖಜಾಂಚಿ ರೂಪಾ ರವಿ, ನಿರ್ದೇಶಕರು, ಮಾಜಿ ಅಧ್ಯಕ್ಷರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...

Rotary Club Shimoga Midtown ಕ್ರೀಡೆಗಳಿಂದ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ- ವಸಂತ ಹೋಬಳಿದಾರ್

Rotary Club Shimoga Midtown ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಖಿನ್ನತೆ ದೂರವಾಗುವುದರ ಜೊತೆಗೆ...