Wednesday, December 10, 2025
Wednesday, December 10, 2025

Padma Gandhi Film ನಿರ್ದೇಶಕ ಸುಚೇಂದ್ರ ಪ್ರಸಾದ್ ನಿರ್ದೇಶನದ “ಪದ್ಮಗಂಧಿ” ಚಿತ್ರ ಡಿ. 12 ರಂದು ಶಿವಮೊಗ್ಗದ ಭಾರತ್ ಸಿನಿಮಾದಲ್ಲಿ ಪ್ರದರ್ಶನ

Date:

Padma Gandhi Film ಹಿರಿಯ ನಟ ಸುಚೇಂದ್ರ ಪ್ರಸಾದ್ ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಲು ಮುಂದಾಗಿರುವ ಪದ್ಮಗಂಧಿ ತೆರೆಗೆ ಸಿದ್ಧವಾಗಿದೆ.

ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣವಾಗಿರುವ ನಿರ್ಮಾಣವಾಗಿರುವ ಈ ಚಿತ್ರಕ್ಕೆ ನಿವೃತ ಪ್ರಾಧ್ಯಾಪಕಿ ಎಸ್‌. ಆರ್.ಲೀಲಾ ಚಿತ್ರದ ಕಥೆ ಬರೆದಿದ್ದು, ಚಿತ್ರ ನಿರ್ಮಾಣಕ್ಕೂ ಬಂಡವಾಳ ಹೂಡಿದ್ದಾರೆ.

ಕಳೆದ ತಿಂಗಳು ದುಬೈನಲ್ಲಿ ನಡೆದ ಇಂಡೋ ದುಬೈ ಇಂಟ‌ರ್ ನ್ಯಾಷನಲ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಪದ್ಮಗಂಧಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.

ನವೆಂಬರ್‌ನಲ್ಲಿ ನಡೆಯಲಿರುವ ಪನೋರಮ ಚಿತ್ರೋತ್ಸವಕ್ಕೂ ಪದ್ಮಗಂಧಿ ಆಯ್ಕೆಯಾಗಿದೆ. ಈ ಸಿನಿಮಾವು ಆದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವಿಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ, ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖ‌ರ್ ಇವರೊಂದಿಗೆ ರಿಯಲ್‌ದಲ್ಲಿ ಹೆಸರು ಮಾಡಿರುವ ಡಾ. ಆ‌ರ್.ಗಣೇಶ್‌, ಡಾ.ಗೌರಿ ಸುಬ್ರಹ್ಮಣ್ಯ, ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್ ಮೃತ್ಯುಂಜಯ ಶಾಸ್ತ್ರಿ, ಪಂಡಿತಾ ಪ್ರಸನ್ನ ವೈದ್ಯ, ಡಾ.ದೀಪಕ್ ಪರಮಶಿವನ್, ಹೇಮಂತಕುಮಾರ. ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಪಾರ್-ನಾಗರಾಜ್ ಅದ್ವಾನಿ, ಗಿರಿಧರ್ ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನ ಈ ಚಿತ್ರಕ್ಕಿದೆ. ಭಾರತೀಯ ಪರಂಪರೆಯನ್ನು ಚಿತ್ರಿಸಿ ನೈಜವಾಗಿ ತೆರೆಗೆ ತರುವಲ್ಲಿ ನಟ ನಿರ್ದೇಶಕ ಸುಚೇಂದ್ರ ಪ್ರಸಾದ್ ತಮ್ಮೆಲ್ಲ ಜಾಣ್ಮೆಯನ್ನು ದಾರೆಯೆರದಿದ್ದಾರೆ.

ಪ್ರತಿಯೊಬ್ಬರೂ ನೋಡಲೇಬೇಕಾದ ಚಿತ್ರ ಇದಾಗಿದೆ.

Padma Gandhi Film ಪ್ರತಿಯೊಂದು ಹಂತದಲ್ಲಿ ಚಿತ್ರ ಕಥೆಗೆ ಪಾತ್ರದ ಮೂಲಕ ಜೀವಕಳೆ ತುಂಬಿದ ಪದ್ಮಗಂಧಿ ಎಲ್ಲರ ಮನಸ್ಸನ್ನು ಗೆಲ್ಲುವುದು ಸಂಶಯವೇ ಇಲ್ಲ.

ಪದ್ಮಗಂಧಿ ಇದೇ ತಿಂಗಳು 12 ನೆ ತಾರೀಖಿನಂದು ಶಿವಮೊಗ್ಗ ನಗರದ ಭರತ್ (ನೆಹರೂ ರಸ್ತೆಯಲ್ಲಿ ಇರುವ ಸಿಟಿ ಮಾಲ್) ಚಿತ್ರಮಂದಿರದಲ್ಲಿ ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಪ್ರದರ್ಶನವಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...

Good Luck Care Center ದಾನದಿಂದ ತೃಪ್ತಿ ಸಿಗುತ್ತದೆ- ಹೇಮಾ ಬಿ.ಜಿ.ಗೋಣೂರು

ನಾವು ಮಾಡಿದ ಸೇವೆ ದಾನ ಧರ್ಮ ನಮಗೆ ಒಂದಲ್ಲ ಒಂದು ರೀತಿಯಿಂದ...