Sunday, May 3, 2026
Sunday, May 3, 2026

Shimoga News ಮಹಿಳೆಯರ ವ್ಯವಹಾರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ- ಗಣಪತಿ ಶೆಣೈ.

Date:

Shimoga News ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಆಭರಣ ಜ್ಯೂವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.
ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಎರಡು ದಿನ ಆಯೋಜಿಸಿರುವ ಇನ್ನರ್ ವ್ಹೀಲ್ ಜಿಲ್ಲಾ ಸಮಾವೇಶದಲ್ಲಿ ವ್ಯಾಪಾರ ಮಳಿಗೆ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಹಿಳೆಯರು ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು. ಸಂಘ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವುದರ ಜತೆಗೆ ಆರ್ಥಿಕವಾಗಿ ಸಬಲರಾಗಬೇಕು. ಪರಸ್ಪರ ಒಡನಾಟ ಹೆಚ್ಚುತ್ತದೆ. ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಹೇಳಿದರು.
ಎಂಟು ಜಿಲ್ಲೆಗಳಿಂದ ಮಹಿಳಾ ಉದ್ಯಮಿಗಳು ಆಗಮಿಸಿದ್ದು, ಅವರ ವ್ಯಾಪಾರ ವಹಿವಾಟು ಅತ್ಯುತ್ತಮವಾಗಿ ನಡೆಯುವುದರ ಮುಖಾಂತರ ಅವರಿಗೆ ಪ್ರೋತ್ಸಾಹಿಸಬೇಕು. ನಗರದ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಸಮಾವೇಶ ಯಶಸ್ವಿಯಾಗಲಿದೆ ಎಂದು ತಿಳಿಸಿದರು.
Shimoga News ಡಾ. ಕಡಿದಾಳ್ ಗೋಪಾಲ್ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಸಮಾವೇಶದಲ್ಲಿ 700ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಚಲನಚಿತ್ರ ನಟಿ ಪೂಜಾ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಅನೂಪ್, ಅಂಜು ಆದಿಮೂರ್ತಿ, ಬಿಂದು ವಿಜಯ ಕುಮಾರ್, ಕಾರ್ಯದರ್ಶಿ ವೀಣಾ ಹರ್ಷ, ಆಶಾ ಶ್ರೀಕಾಂತ್, ಜಯಂತಿ ವಾಲಿ, ಮಧುರ ಮಹೇಶ್, ಲತಾ ಸೋಮಣ್ಣ, ಶ್ವೇತಾ ಅಶಿತ್, ಮಾಜಿ ಜಿಲ್ಲಾ ಚೇರ್ಮನ್ ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಜ್ಯೋತಿ ಸುಬ್ಬೇಗೌಡ, ಆರ್ ಮನೋಹರ್, ಕಡಿದಾಳ್ ಪ್ರಕಾಶ್ ಹಾಗೂ ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...