Sunday, December 14, 2025
Sunday, December 14, 2025

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

Date:

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಗಳಾದ ಡಿ.ಎಸ್.ಅರುಣ್ ಅವರು ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು.

ರಾಜ್ಯಾದ್ಯಂತ ಸಾವಿರಾರು ಗ್ರಂಥಪಾಲಕರು ತಿಂಗಳ ಕನಿಷ್ಠ ವೇತನಕ್ಕೂ ವಂಚಿತರಾಗುತ್ತಿರುವ ಬಗ್ಗೆ ಹಲವು ಜಿಲ್ಲೆಗಳಿಂದ ಬಂದಿರುವ ದೂರುಗಳು ಭಾರೀ ಆತಂಕಕ್ಕೆ ಕಾರಣವಾಗಿದ್ದು, ಕೆಲವು ಗ್ರಂಥಪಾಲಕರು ಆರ್ಥಿಕ ಬಿಕ್ಕಟ್ಟಿನಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆಗಳು ವರದಿಯಾದ ಹಿನ್ನೆಲೆ ವಿಷಯ ಮತ್ತಷ್ಟು ಗಂಭೀರವಾಗಿದೆ ಎಂದು ಮಾನ್ಯ ಶಾಸಕರು ಉಲ್ಲೆಕಿಸಿದರು.

ವೇತನ ಪಾವತಿ ಕಡಿಮೆ ಆಗಲು ಕಾರಣವಾಗಿರುವ ಆಡಳಿತಾತ್ಮಕ ಗೊಂದಲಗಳು, ಹಣ ಬಿಡುಗಡೆ ವಿಳಂಬ ಮತ್ತು ವರ್ಗೀಕರಣದ ದೋಷಗಳು ಕುರಿತು ಸರ್ಕಾರ ತಕ್ಷಣ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. ಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.

ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಮಾನ್ಯ ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

D S Arun ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು . ESI ಮತ್ತು PF ಅಂತಹ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಗ್ರಂಥಪಾಲಕರಿಗೆ ತಕ್ಷಣ ಜಾರಿಗೊಳಿಸಬೇಕು, ಗ್ರಂಥಪಾಲಕರಿಗೆ ಪ್ರತ್ಯೇಕ ಸೇವಾ ನಿಯಮಾವಳಿ (Service Rules) ರೂಪಿಸಬೇಕು ಮತ್ತು ರಾಜ್ಯ ಬಜೆಟ್‌ನಲ್ಲಿ ಇವರಿಗಾಗಿ ಪ್ರತ್ಯೇಕ ವಿನಿಯೋಗ ಒದಗಿಸಬೇಕು ಎಂದು ಸ್ಪಷ್ಟವಾಗಿ ಹೇಳಿದರು. ಈ ಮೂರು ಕ್ರಮಗಳು ಈಗಿನ ಪರಿಸ್ಥಿತಿಯಲ್ಲಿ ಅತಿ ಅವಶ್ಯಕವಾಗಿವೆ ಎಂದು ಹೇಳಿದರು.

ವೇತನ ಪಾವತಿಯಲ್ಲಿ ಪಾರದರ್ಶಕತೆ ಹಾಗೂ ವಿಳಂಬ ನಿವಾರಣೆಗಾಗಿ ನೇರ ಲಾಭ ವರ್ಗಾವಣೆ (DBT) ವ್ಯವಸ್ಥೆ ಜಾರಿಗೆ ತರಬೇಕೆಂದು ಕೂಡ ಅವರು ಸರ್ಕಾರಕ್ಕೆ ಸಲಹೆ ನೀಡಿದರು. ಲಕ್ಷಾಂತರ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿರುವ DBT ಮಾದರಿಯನ್ನು, ರಾಜ್ಯವು ಕೇವಲ ಆರು ಸಾವಿರಕ್ಕೂ ಕಡಿಮೆಯಿರುವ ಗ್ರಂಥಪಾಲಕರಿಗೆ ಜಾರಿಗೊಳಿಸುವುದು ಬಹಳ ಸುಲಭ ಮತ್ತು ಪರಿಣಾಮಕಾರಿ ಎಂಬುದನ್ನು ಡಿ. ಎಸ್. ಅರುಣ್ ಅವರು ಉದಾಹರಣೆ ನೀಡಿದರು.

RDPR ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ, ಅವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉತ್ತರ ನೀಡುತ್ತಾ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಡಿ.ಎಸ್.ಅರುಣ್ ಅವರ ಸೂಚನೆಗಳನ್ನು ಸಂಪೂರ್ಣವಾಗಿ ಸಮರ್ಥಿಸಿ, RDPR ಸಚಿವರು ಮತ್ತು ಇಲಾಖೆಯೊಂದಿಗೆ ಚರ್ಚಿಸಿ DBT ವ್ಯವಸ್ಥೆ ಸೇರಿದಂತೆ ಸಲ್ಲಿಸಿದ ಶಿಫಾರಸುಗಳ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ವಂದನೆಗಳೊಂದಿಗೆ

ಕಾರ್ಯಾಲಯ:: ಮಾನ್ಯ ಶಾಸಕರು ಡಿ.ಎಸ್.ಅರುಣ್ ವಿಧಾನ ಪರಿಷತ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೆನರಾ ಬ್ಯಾಂಕ್...