Sunday, August 2, 2026
Sunday, August 2, 2026

Shamanur Shivashankarappa ದಾವಣಗೆರೆಯ ದೀಪದಂತಿದ್ದ ಶಾಮನೂರು ಶಿವಶಂಕರಪ್ಪ

Date:

Shamanur Shivashankarappa ದಾವಣಗೆರೆಯ ಹಿರಿಯ ಸಮಾಜ ಸೇವಾಧುರಂಧರ ರಾಜಕಾರಣಿ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಅವರು ಬಳಲುತ್ತಿದ್ದರು
ಎಂದು ಕುಟುಂಬ ವಲಯದವರು ಹೇಳಿದ್ದಾರೆ.
ತೊಂಭತ್ತೈದು ವರ್ಷದ ಹಿರಿಯ ಚೇತನ ,ದಾವಣಗೆರೆಯ ದೀನರ ದೀಪವಾಗಿದ್ದ
ಶಿವಶಂಕರಪ್ಪ ಅಗಲಿಕೆ ನಾಡಿಗೆ ಅಪಾರ ನಷ್ಟವುಂಟುಮಾಡಿದೆ.
ದಾವಣಗೆರೆಯ ನಗರಸಭೆಯ ಸದಸ್ಯರಾಗಿ ,ಜನಾನುರಾಗಿ ಬೆಳೆದವರು ಮತ್ತೆ ಹಿಂತಿರುಗಿ ನೋಡಲೇ ಇಲ್ಲ. ಸ್ಥಳೀಯ ಮತ್ತು ನಾಡಿನ ರಾಜಕೀಯ ಕ್ಷೇತ್ರ ಅವರನ್ನ ಬರಮಾಡಿಕೊಂಡಿತು.
ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಸಮುದಾಯದ ಗಟ್ಟಿ ದನಿಯಾಗಿದ್ದರು.
ಉದ್ಯಮಿಯಾಗಿ ಅಪಾರ ಜ್ಞಾನ,ಅನುಭವ ಶ್ರೀಮಂತರಾಗಿದ್ದರು.
ಸಮಾಜ ಸೇವೆಯಲ್ಲಂತೂ ಶಾಮನೂರು ಎಂಬ ಹೆಸರೇ ಸಾಕು ಅಸಂಖ್ಯ ವ್ಯಕ್ತಿಗಳು,ಕುಟುಂಬಗಳು, ಸಂಘ ಸಂಸ್ಥೆಗಳಿಗೆ ಉದಾರ ದೇಣಿಗೆ ನೀಡಿದ ದಾನಶೂರ ಕರ್ಣನಂತೆ ಮಿಂಚಿದ್ದರು.
Shamanur Shivashankarappa ಶಿಕ್ಷಣ ಕ್ಷೇತ್ರದಲ್ಲಿ ಅವರು ಮುನ್ನಡೆಸಿದ ಬಾಪೂಜಿ ಶಿಕ್ಷಣ ಸಂಸ್ಥೆ ದೇಶದಲ್ಲೇ ಖ್ಯಾತಿ ಹೊಂದಿದೆ.
ವೈದ್ಯಕೀಯ ,ಕಾನೂನು ,ಪದವಿ, ತಾಂತ್ರಿಕ ಕಾಲೇಜುಗಳ ಸ್ಥಾಪನೆಯಿಂದ ವಿದ್ಯಾಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ್ದರು. ಪ್ರಸ್ತುತ
ವಿಧಾನಸಭೆಯ ಹಿರಿಯ ಸದಸ್ಯರಾಗಿದ್ದರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಶಾಮನೂರರ ಸೇವೆ ದಾಖಲೆಯಾಗಿದೆ.
ಶಾಮನೂರು ಶಿವಶಂಕರಪ್ಪನವರ ನಿಧನಕ್ಕೆ ನಾಡಿನ ಗಣ್ಯಾತಿಗಣ್ಯರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಶಾಸಕ ವೃಂದ, ಸಂಸದರು ಶಾಮನೂರರ ನಿಧನಕ್ಕೆ ಕಂಬಿನಿ ಮಿಡಿದಿದ್ದಾರೆ.
ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶಿವಶಂಕರಪ್ಪನವರ ಜನಪರ ಕಾಳಜಿ ಮತ್ತು ಸಾಧನೆಗಳನ್ನ ಕೊಂಡಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...