Sunday, August 2, 2026
Sunday, August 2, 2026

ಬಸವ ವಸತಿ ಯೋಜನೆ ಸಹಾಯಧನ ಹೆಚ್ಚಿಸಲು ಸರ್ಕಾರದ ಚಿಂತನೆ- ಸಚಿವ ಜಮೀರ್ ಅಹ್ಮದ್

Date:

ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಎಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ
ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರಿಸಿದರು.

ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್‍ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಅಕ್ಟೋಬರ್-2025ರ ಅಂತ್ಯಕ್ಕೆ 1324.26 ರೂ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...