Sunday, May 3, 2026
Sunday, May 3, 2026

ಆಯನೂರು ಸಮೀಪದ ಬಿಲ್ಗುಣಿಯಲ್ಲಿ ಭತ್ತದ ಹುಲ್ಲಿನ ಲೋಡ್ ಇದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿ ಬೆಂಕಿ ಅವಘಡ

Date:

ಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್​ ಭತ್ತ ಸುಟ್ಟು ಭಸ್ಮವಾಗಿದೆ.

ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಬಿಲ್ಗುಣಯಲ್ಲಿ ಈ ಘಟನೆ ನಡೆದಿದೆ.

ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌‌ ಗೆ
ಕಂಬದಿಂದ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ
ಭತ್ತದ ಹೊರೆಗಳು
ಬೆಂಕಿ ಹೊತ್ತಿಕೊಂಡು ಉರಿದಿವೆ.

ತಮ್ಮಡಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ಅವಘಡ ಸಂಭವಿಸಿದೆ.

ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ಭತ್ತದ ಪೈರು ನಾಶದಿಂದ
ರೈತನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವರದಿಯಾಗಿದೆ.

ನಿನ್ನೆ ಮಧ್ಯಾಹ್ನ ಸಂಭವಿಸಿದ ಈ ಅನಾಹುತದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ದುರಂತಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗ್ರಾಮಸ್ಥರು
ಗಂಭೀರ ಆರೋಪಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...