Wednesday, January 21, 2026
Wednesday, January 21, 2026

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

Date:

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕಾರಣಿಗಳು, ಮಾಜಿ ಸಚಿವರು ಮತ್ತು ಪ್ರಭಾವಿ ರಾಜಕೀಯ ಧುರೀಣರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ಅಗಲಿಕೆಯ ಸುದ್ದಿ ಅತೀವ ಆಘಾತವನ್ನು ತಂದಿದೆ ಎಂದು ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.

ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಇಡೀ ಸಮಾಜಕ್ಕೆ ಅವರ ನೇತೃತ್ವ, ಮಾರ್ಗದರ್ಶನ, ಅವರ ಕೊಡುಗೆ ಅಸಾಧಾರಣವಾದದ್ದು. ನಾಡಿನ ರಾಜಕೀಯ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಪಕ್ಷಾತೀತವಾಗಿ ಅವರು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆಯಿಂದ ಸಮಾಜ ತನ್ನ ಮೇರು ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ ನಮ್ಮ ಕುಟುಂಬದ ಒಬ್ಬ ಹಿರಿಯರನ್ನು ಕಳೆದುಕೊಂಡ ದುಃಖ ನಮಗಾಗಿದೆ ಎಂದಿದ್ದಾರೆ.

B.Y. Raghavendra ವಿಶೇಷವಾಗಿ, ಅವರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿವೆ. ಸಾವಿರಾರು ಜನರಿಗೆ ಆರೋಗ್ಯ ಸೇವೆ ನೀಡಿದ್ದಾರೆ. ಅವರ ಸಮಾಜ ಸೇವೆ ಕೂಡ ಅಸಾಧಾರಣವಾದದ್ದು. ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಅವರ ಮಾರ್ಗದರ್ಶನವನ್ನು, ನೇತೃತ್ವವನ್ನು ನಾವು ಮರೆಯುವುದು ಸಾಧ್ಯವೇ ಇಲ್ಲ! ಒಬ್ಬ ದೂರದೃಷ್ಟಿಯ ನಾಯಕನ, ಮುತದ್ಧಿ ಧುರೀಣರನ್ನು, ರಾಜ್ಯ ಒಬ್ಬ ಅಪರೂಪದ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ, ನನಗೆ ಅವರ ಮಾರ್ಗದರ್ಶನಗಳನ್ನು, ಪ್ರೀತಿ, ಆತ್ಮೀಯತೆ, ಆಶೀರ್ವಾದಗಳನ್ನು ಶಬ್ದಗಳಲ್ಲಿ ವಿವರಿಸುವುದು ಸಾಧ್ಯವಿಲ್ಲ.ದಿವಂಗತ ನಾಯಕರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತಾ, ಅವರ ಕುಟುಂಬ ಸದಸ್ಯರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಕೋರುತ್ತಾ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...