Thursday, March 19, 2026
Thursday, March 19, 2026

Guarantee Scheme ಮಿಳ್ಳಘಟ್ಟದಲ್ಲಿ ಅತಿ ಕ್ರಮ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುತ್ತಿದೆ, ತಡೆಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಗೆ ಮನವಿ

Date:

Guarantee Scheme ಕಾನೂನು ಉಲ್ಲಂಘಿಸಿ ಶಿವಮೊಗ್ಗ ನಗರದ ಮಿಳ್ಳಘಟ್ಟ ಮುಖ್ಯ ರಸ್ತೆ ಅಣ್ಣ ನಗರದ ನಾಲ್ಕನೇ ತಿರುವು ಬಲ ಭಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ಪ್ರಾಧಿಕಾರ ಜಿಲ್ಲಾ ಸದಸ್ಯೆ ಬಿ.ಎ.ಅರ್ಚನಾ ನಿರಂಜನ್ ಆರೋಪಿಸಿದರು.

ರಾಜಕಾಲುವೆ ಒಡೆದು ಹಾಕಿರುವ ಪರಿಣಾಮ ಕಸ ಕಡ್ಡಿ ಗಲೀಜು ತುಂಬಿಕೊಂಡು ಸಾಂಕ್ರಾಮಿಕ ಕಾಯಿಲೆಗೆ ಅಹ್ವಾನವಾಗಿದೆ. ಹಾಗಾಗಿ ಇದರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಸ್ಥಳೀಯ ನಿವಾಸಿಗಳಿಗೆ ಅನುಕೂಲ ಮಾಡಿಕೊಡುವಂತೆ ಆಯಕ್ತರಿಗೆ ಮನವಿ ಮೂಲಕ ಒತ್ತಾಯಿಸಿದರು.

ವಾಣಿಜ್ಯ ಕಟ್ಟಡವು ನೀಲಿ ನಕ್ಷೆಯಲ್ಲಿ ತೋರಿಸಿರುವಂತೆ ನಿರ್ಮಾಣ ಮಾಡದೇ, ಅಕ್ಕ-ಪಕ್ಕ ಒತ್ತವರಿ ಮಾಡಿಕೊಂಡು, ಯಾವುದೇ ರೀತಿ ಪಾರ್ಕಿಂಗ್ ಸ್ಥಳಾವಕಾಶ ಬಿಡದೆ ನಿರ್ಮಿಸಲಾಗುತ್ತಿದೆ, ರಸ್ತೆಯಲ್ಲಿ ಮರಳು, ಜಲ್ಲಿ ಕಲ್ಲು ಹಾಗೂ ಸಿಮೆಂಟ್ ಬ್ರಿಕ್ಸ್‌ನ್ನು ಎಲ್ಲೆಂದರಲ್ಲಿ ಹಾಕಿರುವುದರಿಂದ ವಾಹನ ಸವಾರರಿಗೆ ಹಾಗೂ ಸ್ಥಳೀಯರಿಗೆ ಓಡಾಡಲು ತೊಂದ್ರೆಯಾಗುತ್ತಿದೆ ಎಂದು ದೂರಿದರು.

Guarantee Scheme ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರಿಗೆ ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾ ಸದಸ್ಯರಾದ ಅರ್ಚನಾ ನಿರಂಜನ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...