Friday, February 6, 2026
Friday, February 6, 2026

Madhu Bangarappa ಮುಂದಿನ ಶೈಕ್ಷಣಿಕ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕಾತಿ- ಮಧು ಬಂಗಾರಪ್ಪ

Date:

Madhu Bangarappa ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಉತ್ತರಿಸಿದರು.

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ.

ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

Madhu Bangarappa ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ₹83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ₹80.66 ಕೋಟಿ ಲಭ್ಯವಿರುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...