Saturday, May 16, 2026
Saturday, May 16, 2026

S. Rudregowda ಯೋಗ-ಧ್ಯಾನಗಳು ಜೀವನಕ್ಕೆ ಅಗತ್ಯವಿರುವ ಎಲ್ಲ ಮೌಲ್ಯಗಳನ್ನು ಒಗ್ಗೂಡಿಸುತ್ತದೆ- ಎಸ್.ರುದ್ರೇಗೌಡ

Date:

S. Rudregowda ಕುಟುಂಬದ ಶಾಂತಿ, ನೆಮ್ಮದಿ ಜತೆಯಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡಲು ಯೋಗ ಮತ್ತು ಧ್ಯಾನ ಪ್ರಕ್ರಿಯೆ ಸಹಕಾರಿಯಾಗುತ್ತದೆ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಅಂತರಾಷ್ಟ್ರೀಯ ಯೋಗ ಧ್ಯಾನ ದಿನಾಚರಣೆ ಅಂಗವಾಗಿ ಶಿವಗಂಗಾ ಯೋಗ ಕೇಂದ್ರ ಕೃಷಿ ನಗರ, ಎಲ್‌ಬಿಎಸ್ ನಗರ, ಅಶ್ವತ್ಥ್ ನಗರಗಳ ಯೋಗಶಾಖೆಗಳಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಹುತೇಕ ರಾಷ್ಟ್ರಗಳ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ಅಶಕ್ತತೆ, ಒತ್ತಡ, ಘರ್ಷಣೆ, ಹಿಂಸೆ, ಅನಿಶ್ಚಿತತೆ ಮತ್ತು ಭಾವನಾತ್ಮಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಯೋಗ, ಧ್ಯಾನಗಳ ಆಚರಣೆಯಿಂದ ಪ್ರತಿಯೊಬ್ಬ ವ್ಯಕ್ತಿಯ ದೇಹ, ಮನಸ್ಸು, ಬುದ್ಧಿ ಚಿತ್ತಗಳಲ್ಲಿ ಪ್ರೀತಿ, ಪ್ರೇಮ, ಸ್ನೇಹ, ಸಹಬಾಳ್ವೆ, ನಂಬಿಕೆ ಮತ್ತು ಜೀವನಕ್ಕೆ ಅಗತ್ಯವಿರುವ ಎಲ್ಲ ಮೌಲ್ಯಗಳನ್ನು ಒಗ್ಗೂಡಿಸುತ್ತದೆ ಎಂದು ತಿಳಿಸಿದರು.

ಶಿವಗಂಗಾ ಯೋಗಕೇಂದ್ರವು ಯೋಗಾಚಾರ್ಯ ಡಾ. ಸಿ.ವಿ.ರುದ್ರಾರಾಧ್ಯ ಅವರ ನೇತೃತ್ವದ ತಂಡ ಕಾರ್ಯೋನ್ಮುಖರಾಗಿರುವುದು ಶ್ಲಾಘನೀಯ ಎಂದು ಹೇಳಿದರು.

S. Rudregowda ವಿರಕ್ತ ಮಠದ ಹಾಲಯ್ಯ ಮಾತನಾಡಿ, ಧ್ಯಾನದಿಂದ ನಮ್ಮ ದೇಹದಲ್ಲಿ ಆಗುವ ಸೂಕ್ಷ್ಮ ಬದಲಾವಣೆಗಳನ್ನು ವೈಜ್ಞಾನಿಕವಾಗಿ ವಿವರಿಸಿದರು. ಶಿವಗಂಗಾ ಯೋಗಕೇಂದ್ರದ ಕಾರ್ಯಾಧ್ಯಕ್ಷ ಡಾ. ಸಿ.ವಿ.ರುದ್ರಾರಾಧ್ಯ ಮಾತನಾಡಿ, ನಗರದ ವಿವಿಧೆಡೆಗಳಲ್ಲಿ ಸಾರ್ವಜನಿಕರಿಗೆ ಯೋಗ ತರಬೇತಿ ನೀಡಲಾಗುತ್ತಿದೆ ಎಂದರು.

ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಎಚ್.ಎಂ.ಚಂದ್ರಶೇಖರಯ್ಯ ಕಾರ್ಯಕ್ರಮ ನಿರೂಪಿಸಿದರು. ಶಿವಗಂಗಾ ಯೋಗಕೇಂದ್ರದ ಪೋಷಕ ಪರಮೇಶ್, ಜಿ.ಎಸ್.ಓಂಕಾರ್, ನೀಲಕಂಠರಾವ್, ಜಿ.ವಿಜಯಕುಮಾರ್, ವಿಜಯ ಬಾಯರ್, ಅನಿಲ್‌ಕುಮಾರ್, ಪ್ರೊ. ಸುರೇಶ್, ಕಾಟನ್ ಜಗದೀಶ್, ಕೃಷ್ಣಮೂರ್ತಿ, ನಾಗರತ್ನ ಚಂದ್ರಶೇಖರಯ್ಯ, ಜ್ಯೋತಿ, ರುದ್ರೇಶ್, ರವಿ ಹಾಗೂ ಯೋಗ ಶಿಬಿರಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...