Tuesday, March 31, 2026
Tuesday, March 31, 2026

Shimoga News ಕನ್ನಡ ಬಾರದ ಸರ್ಕಾರಿ ನೌಕರರಿಗಾಗಿ ಅಂಚೆಮೂಲಕ ಕನ್ನಡ ಶಿಕ್ಷಣ ಯೋಜನೆ: ಅರ್ಜಿಗಳ ಆಹ್ವಾನ

Date:

Shimoga News ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಒಂದು ವರ್ಷದ ಅಂಚೆ ಮುಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವ ವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟಿçÃಕೃತ ಬ್ಯಾಂಕುಗಳ ನೌಕರರುಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿಯ ಗೈರು ಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊAಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿ ನೀಡಲಾಗುವುದು.
Shimoga News ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 18-50 ವಯೋಮಿತಿಯ ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ರೂ. 250/- ಡಿ.ಡಿ.ಯನ್ನು ಕಳುಹಿಸಬೇಕು. ನೋಂದಾಯಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಪ್ರಭಾರಿ ಅಧಿಕಾರಿಗಳು, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.ಸಂ.0821-2345128 ಇವರಿಗೆ 5.00 ರೂ.ಗಳ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸ ಹೊಂದಿರುವ ಲಕೋಟೆಯನ್ನು ಕಳುಹಿಸಿ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ದಿ: 10/01/2026 ರೊಳಗಾಗಿ ಸಲ್ಲಿಸುವಂತೆ ಪ್ರಭಾರಿ ಅಧಿಕಾರಿ ಡಾ.ಪಿ.ಆರ್. ಧರ್ಮೇಶ್ ಫನಾಂಡಿಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...