Saturday, May 16, 2026
Saturday, May 16, 2026

Karnataka Skill Development Authority ಸಮಯ ಪಾಲನೆ- ಸಂವಹನ, ವ್ಯಕ್ತಿತ್ವ ವಿಕಸನ& ವೃತ್ತಿ ಕೌಶಲ್ಯ ಕಾರ್ಯಾಗಾರ.

Date:

Karnataka Skill Development Authority ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘ, ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ. 27 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಮಯ ಪಾಲನೆ -ಸಂವಹನ, ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಕೌಶಲ್ಯ ಕಾರ್ಯಾಗಾರ ಹಾಗೂ 2025-29ನೇ ಸಾಲಿಗೆ ನೂತನವಾಗಿ ಆಯ್ಕೆಯಾಗಿರುವ ಶಿವಮೊಗ್ಗ ಜಿಲ್ಲೆ, ವಿಶೇಷ ಘಟನ ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಬೋಧಕೇತರ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಬೋಧಕೇತರ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಶಿವಮೊಗ್ಗ ಜಿಲ್ಲಾ ಸಂಘದ ಮಹಾಸಭೆಯನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Karnataka Skill Development Authority ಉದ್ಘಾಟಿಸುವರು. ಕ.ರಾ.ಸಾ.ಶಿ.ಇ.ಲಿ.ನೌ.,ವಾ.ಚಾ.ಮತ್ತು ಗ್ರೂ.ಡಿ.ನೌಕರರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಎಸ್.ಕೆ. ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಪದಗ್ರಾಹಿ ಪದಾಧಿಕಾರಿಗಳಿಗೆ ಸನ್ಮಾನ ಮಾಡಲಿದ್ದಾರೆ. ಕ.ರಾ.ಸ.ನೌ.ಸಂ.ಜಿಲ್ಲಾಧ್ಯಕ್ಷ ಅರ್.ಮೋಹನ್ ಕುಮಾರ್ ನಿವೃತ್ತ ಬೋಧಕೇತರ ನೌಕರರಿಗೆ ಸನ್ಮಾನ ಮಾಡಲಿದ್ದಾರೆ. ಕ.ರಾ.ಸಾ.ಶಿ.ಇ.ಲಿ.ನೌ.,ವಾ.ಚಾ.ಮತ್ತು ಗ್ರೂ.ಡಿ.ನೌಕರರ ಸಂಘದ ರಾಜ್ಯಾಧ್ಯಕ್ಷ ನವೀನ ಎಸ್.ಆರ್. ಇವರು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ. ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ ಬಿ.ಇವರು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...