Sunday, February 8, 2026
Sunday, February 8, 2026

ಹೊಸಮನೆ ಶ್ರೀನರಸಿಂಹ ದೇಗುಲದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ

Date:

ಶಿವಮೊಗ್ಗ ಹೊಸಮನೆ ನಾಲ್ಕನೇ ತಿರುವಿನ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ದೇವಸ್ಥಾನ ಸಮಿತಿ ವತಿಯಿಂದ ಡಿ. 30ರಂದು ಇಡೀ ದಿನ ವೈಕುಂಠ ಏಕಾದಶಿಯ ವಿಶೇಷ ಪೂಜೆ, ಆರಾಧನೆ, ಭರತನಾಟ್ಯ, ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ ಪ್ರಮುಖರ ಧಾರ್ಮಿಕ ಸಭೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಡಿಸೆಂಬರ್ 30ರ ಮಂಗಳವಾರ ಬೆಳಿಗ್ಗೆ 9:00 ಗಂಟೆಯಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ನಡೆಯಲಿದೆ.
ಸಂಜೆ 6 ರಿಂದ ಸಪ್ತಸ್ವರ ಟ್ರಸ್ಟ್ ನ ಸಂಗೀತ ಕಲಾವಿದರಿಂದ ಸಂಗೀತ ಲಹರಿ ಭಕ್ತಿಗೀತೆಗಳ ಪ್ರಸ್ತುತತೆ ನಡೆಯಲಿದೆ.
ತದನಂತರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ನವರೂಪದ ಭರತನಾಟ್ಯ ಕಾರ್ಯಕ್ರಮವನ್ನು ಪ್ರತಿಭಾವಂತ ಪುಟಾಣಿ ಕಲಾವಿದರು ನಡೆಸಿಕೊಡಲಿದ್ದಾರೆ.
ಮಧ್ಯಾಹ್ನ ಪೂಜೆಯ ನಂತರ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ,ಈಶ್ವರಪ್ಪ, ಸಚಿವ ಮಧು ಬಂಗಾರಪ್ಪ, ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ ಡಿಎಸ್ ಅರುಣ್, ರುದ್ರೆಗೌಡ, ಮಂಜುನಾಥಗೌಡ, ಸೂಡಾಧ್ಯಕ್ಷ ಸುಂದರೇಶ್ ಸೇರಿದಂತೆ ವಿವಿಧ ಗಣ್ಯರು ಆಗಮಿಸಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವರನ್ನು ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಸುರೇಶ್ ಬಾಳೆಗುಂಡಿ, ಅಧ್ಯಕ್ಷ ಗಣೇಶ್ ಎಲ್, ಉಪಾಧ್ಯಕ್ಷ ಬಸವರಾಜ್ ಎಂ.ಆರ್., ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಧಾನ ಅರ್ಚಕರಾದ ಶ್ರೀನಿವಾಸ ಮೂರ್ತಿ ಹಾಗೂ ಪದಾಧಿಕಾರಿಗಳು ಸ್ವಾಗತಿಸಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ...

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...

Siddaramaiah ಎಂಎಸ್ಐಎಲ್ ವತಿಯಿಂದ ಚಿಟ್ಸ್ ಮತ್ತು ಸಾಫ್ಟ್ ವೇರ್ ,ಮೊಬೈಲ್ ಆ್ಯಪ್ ಬಿಡುಗಡೆ.

Siddaramaiah ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್...

Shimoga Bharat Scouts and Guides ಶಿಬಿರಗಳು ಮಕ್ಕಳ ನಡುವೆ ಉತ್ತಮ ಬಾಂಧವ್ಯ ರೂಪಿಸುತ್ತವೆ- ಶಕುಂತಲಾ ಚಂದ್ರಶೇಖರ್

Shimoga Bharat Scouts and Guides ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರ...